Advertisement

ಎಫ್ಬಿಯಲ್ಲಿ ಸಿದ್ದು ವಿರುದ್ಧ ಜನಾರ್ದನ ರೆಡ್ಡಿ ಕಿಡಿ

12:38 PM Mar 24, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ ಶುಕ್ರವಾರ ಬಿಡುಗಡೆ ಮಾಡಿದ್ದ ಯಡಿಯೂರಪ್ಪ ಅವರ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಫೇಸ್‌ಬುಕ್‌ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Advertisement

ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಸುಳ್ಳಿನ ಸರದಾರ ಸಿದ್ದರಾಮಣ್ಣನ ಮುಖಕ್ಕೆ ಮಹಾ ಮಂಗಳಾರತಿಯಾಗಿದೆ ಎಂದು ಹೆಡ್‌ಲೈನ್‌ ನೀಡಿ, ಪೋಸ್ಟ್‌ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಬರೆದಿದ್ದಾರೆ ಎನ್ನುವ ನಕಲಿ ಡೈರಿಯನ್ನು ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ವಕ್ತಾರರು ಬಿಡುಗಡೆ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ನಕಲಿ ಡೈರಿ ಬಿಡುಗಡೆ ವಿಷಯ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡೈರಿ ಇರುವ ಬಗ್ಗೆ ನನಗೆ ಗೊತ್ತಿತ್ತು.

ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಹಾಗೂ ಯಡಿಯೂರಪ್ಪನವರು ಸೇರಿ ಲೂಟಿ ಹೊಡೆದು ಹೈಕಮಾಂಡ್‌ಗೆ ಹಣ ತಲುಪಿಸಿದ್ದಾರೆ ಎಂದು ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ. ಶನಿವಾರ ಸಂಜೆ ಸ್ವತ: ಐಟಿ ಇಲಾಖೆಯ ಮುಖ್ಯಸ್ಥರು ಮಾತನಾಡಿ, “ನಿನ್ನೆ ನವದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಡೈರಿ ನಕಲಿ ಡೈರಿ’ ಎಂದು ಸ್ಪಷ್ಟನೆ ನೀಡಿದೆ.

ಮಾಜಿ ಮುಖ್ಯಮಂತ್ರಿಯಾಗಿ ಸಾಮಾನ್ಯ ತಿಳುವಳಿಕೆಯೂ ಇಲ್ಲದಂತೆ ಬಾಯಿಗೆ ಬಂದಂತೆ ಬೇಕಾಬಿಟ್ಟಿ ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ವರ್ತನೆಯಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಮಾನ ಕಳೆದುಕೊಂಡು, ಬಾದಾಮಿಯಲ್ಲಿ ಅಲ್ಪಮಾನ ಉಳಿಸಿಕೊಂಡವರು, ಆತುರ ಆತುರವಾಗಿ ಸತ್ಯಾಸತ್ಯತೆ ತಿಳಿಯದೆ ಮಾತನಾಡಬಾರದು ಎಂಬುದನ್ನು ಈಗಲಾದರೂ ಅರಿತುಕೊಳ್ಳಲಿ ಎಂದು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ.

Advertisement

ಇದಕ್ಕೆ ಬಹುತೇಕರು ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ವಿರುದ್ಧವಾಗಿ ಕಮೆಂಟ್‌ ಮಾಡಿದ್ದಾರೆ. 38 ಕಮೆಂಟ್‌, 49 ಶೇರ್‌ ಹಾಗೂ 230ಕ್ಕೂ ಅಧಿಕ ಲೈಕ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next