Advertisement

ಸಿಎಂ ಸಿದ್ದರಾಮಯ್ಯರಿಂದ ವೀರಶೈವ ಲಿಂಗಾಯತರಿಗೆ ದ್ರೋಹ: ಆರೋಪ

06:35 AM May 10, 2018 | |

ಮೊಳಕಾಲ್ಮೂರು: ಚುನಾವಣೆಯಲ್ಲಿ ಮತ ಗಳಿಕೆ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದು ದ್ರೋಹ ಎಸಗಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆರೋಪಿಸಿದರು.

Advertisement

ಪಟ್ಟಣ ಸಮೀಪದ ತೋಟದ ಮನೆಯೊಂದರಲ್ಲಿ ಲಿಂಗಾಯತ ಸಮುದಾಯ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಸಮುದಾಯದಲ್ಲಿ ದ್ವೇಷ ಹುಟ್ಟಿಸುವಂತಹ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ.
ಈ ಚುನಾವಣೆಯಲ್ಲಿ ಅದಕ್ಕೆ ತಕ್ಕ ಫಲ ಅನುಭವಿಸಲಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ವೀರಶೈವ ಲಿಂಗಾಯತರನ್ನು ಒಗ್ಗೂಡಿಸಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ವೀರಶೈವ ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದರು.

ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನುಗಳಿಸಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. ಅದೇ ರೀತಿ
ಮೊಳಕಾಲ್ಮೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಕೂಡ ಅಭೂತಪೂರ್ವ ಗೆಲುವು ಸಾಧಿಸಿ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇವರಿಬ್ಬರಿಂದ ರಾಜ್ಯದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳು
ಆಗಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next