Advertisement

ಅರ್ಜಿ ವಾಪಸ್‌ ಪಡೆದ ಜನಾರ್ದನ ರೆಡ್ಡಿ

12:35 AM Feb 27, 2019 | Team Udayavani |

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್‌ ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ವಾಪಸ್‌ ಪಡೆದಿದ್ದಾರೆ. ಈ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ. ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ಹಾಜರಾದ ಜನಾರ್ದನರೆಡ್ಡಿ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ 4 ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್‌ ಹಾಜರಿದ್ದರು.

Advertisement

ಪ್ರಕರಣವೇನು? : ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್‌. ಸಂತೋಷ ಹೆಗ್ಡೆ ಮತ್ತು ಸಿಇಸಿ ವರದಿ ಆಧರಿಸಿ ಈ ಪ್ರಕರಣ ಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಅದರಂತೆ ಸಿಬಿಐ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದನ್ನು ರದ್ದು ಗೊಳಿಸುವಂತೆ ಕೋರಿ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next