Advertisement

ಬಂಟ್ವಾಳ; ಪ್ರವಾಹಕ್ಕೆ ಸಿಲುಕಿದ ಮಾಜಿ ಸಚಿವ ಜನಾರ್ದನ ಪೂಜಾರಿ, ಕುಟುಂಬ ಸದಸ್ಯರ ರಕ್ಷಣೆ

09:22 AM Aug 11, 2019 | Team Udayavani |

ಬಂಟ್ವಾಳ: ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳು ಜಲಾವೃತವಾಗಿದೆ.

Advertisement

ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿಯವರ ಮನೆ ಜಲಾವೃತವಾಗಿದ್ದು, ರಕ್ಷಣಾ ಪಡೆಯ ಸಹಾಯದಿಂದ ಪೂಜಾರಿ ಮತ್ತವರ ಕುಟುಂಬ ಸದಸ್ಯರನ್ನು ಸ್ಥಳಾಂತರಿಸಲಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಬಂಟ್ವಾಳ ಪೇಟೆ, ಪಾಣೆಮಂಗಳೂರು ಪೇಟೆಯ ಅಂಗಡಿ ಮುಂಗಟ್ಟುಗಳು ಸೇರಿದಂತೆ ಮನೆಗಳು ಜಲಾವೃತಗೊಂಡಿದೆ.

ತಾಲೂಕಿನಲ್ಲಿ ಹೆಚ್ಚಿನ ಸಂಪರ್ಕ ರಸ್ತೆಗಳಿಗೆ ನೀರು ನುಗ್ಗಿದ್ದು, ಜಕ್ರಿಬೆಟ್ಟು ಭಾಗ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರಮುಖವಾಗಿ ಧರ್ಮಸ್ಥಳ-ಮಂಗಳೂರು ಬಸ್ ಸಂಚಾರ ಬಂದ್ ಆಗಿದೆ.

ಪ್ರಸ್ತುತ ನೆರೆಯ ನೀರಿನ ಮಟ್ಟ ನಿಧಾನಕ್ಕೆ ಇಳಿಕೆಯಾಗುತ್ತಿದ್ದು, ಆತಂಕ ಇನ್ನೂ ದೂರವಾಗಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next