Advertisement

ಹೆದರಿಸಿದರೆ ಹೆದರುವ ವ್ಯಕ್ತಿ ನಾನಲ್ಲ: ಗಾಲಿ ರೆಡ್ಡಿ ಸವಾಲು

09:43 PM Jan 27, 2023 | Team Udayavani |

ರಾಯಚೂರು: ಆಸ್ತಿ ಮುಟ್ಟುಗೋಲು ಹಾಕಿಕೊಂಡು ನನ್ನನ್ನು ಹೆದರಿಸಲು ಆಗುವುದಿಲ್ಲ. ನಾನು ಮಾನಸಿಕವಾಗಿ ಸಿದ್ಧವಾಗಿದ್ದು ಯಾವುದಕ್ಕೂ ಹೆದರುವ ವ್ಯಕ್ತಿಯಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖ್ಯಸ್ಥ ಗಾಲಿ ಜನಾರ್ದನ ರೆಡ್ಡಿ ಸವಾಲೆಸೆದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ನಾನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ನನ್ನಿಂದ ಒಂದು ರೂಪಾಯಿ ಜಪ್ತಿ ಮಾಡಿದರೆ 10 ವರ್ಷಗಳಲ್ಲಿ 10 ರೂ. ವಾಪಸ್‌ ಬರುತ್ತದೆ. ಫೆ.10ರೊಳಗೆ ಅನೇಕ ದೊಡ್ಡ ನಾಯಕರು ನಮ್ಮ ಪಕ್ಷ ಸೇರ್ಪಡೆಯಾಗಲಿದ್ದಾರೆ.

ರಾಜ್ಯದ 30 ಕ್ಷೇತ್ರಗಳಲ್ಲಿ ಪಕ್ಷ ಸದೃಢವಾಗಿದ್ದು, ಈಗಾಗಲೇ 13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿದ್ದಾರೆ. 17 ಕ್ಷೇತ್ರಗಳಿಗೆ ಫೆ.10ರೊಳಗೆ ಅಭ್ಯರ್ಥಿಗಳನ್ನು ಘೋಷಿಸಲಾಗುವುದು.

ನಾನು ನನ್ನ ಪಕ್ಷದ ಸಂಘಟನೆ ಮಾಡುತ್ತೇನೆ. ಎಲ್ಲರನ್ನು ಕರೆದು ಏನು ಮಾಡುತ್ತಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ. ರಾಯಚೂರು ಜಿಲ್ಲೆಯಲ್ಲೇ ಬೃಹತ್‌ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದರು.

ರಾಜ್ಯದಲ್ಲಿ 2023ರಲ್ಲಿ ಸರ್ಕಾರ ರಚನೆ ಮಾಡುವ ಶಕ್ತಿ ಭಗವಂತ ನೀಡಲಿ. ನಾನು ಯಾರನ್ನೂ ನಂಬಿ ಪಕ್ಷ ಸ್ಥಾಪಿಸಿಲ್ಲ.

Advertisement

ಕುಟುಂಬದವರಿಗಾಗಿಯೂ ಕಾದಿಲ್ಲ. ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಯಾವ ಕ್ಷೇತ್ರ ಎಂಬುವುದನ್ನು ಮುಂದೆ ಘೋಷಿಸಲಾಗುವುದು. ನನ್ನ ಪುತ್ರಿ ಸಕ್ರಿಯ ರಾಜಕಾರಣಕ್ಕೆ ಆಗಮಿಸುತ್ತಾಳೆ. ಆದರೆ, ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next