Advertisement

ಜನಾರ್ದನ ರೆಡ್ಡಿ ಜಾಮೀನು: ಕೋರ್ಟ್‌ ಇಂದು ನಿರ್ಧಾರ

07:29 AM Nov 14, 2018 | |

ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿ ಮಾಲೀಕ ಸೈಯದ್‌ ಅಹಮದ್‌ ಫ‌ರೀದ್‌ನಿಂದ 57.ಕೆ.ಜಿ. ಚಿನ್ನದ ಗಟ್ಟಿ ಪಡೆದುಕೊಂಡ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ಆದೇಶ ನ್ಯಾಯಾಲಯ ಇಂದು ಪ್ರಕಟಿಸಲಿದೆ.

Advertisement

ಪ್ರಕರಣದಲ್ಲಿ ಜಾಮೀನು ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ, ರೆಡ್ಡಿ ಪರ ವಕೀಲರ ವಾದ ಹಾಗೂ ಸಿಸಿಬಿ ಪರ ವಕೀಲರ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶ
ಬುಧವಾರಕ್ಕೆ ಕಾಯ್ದಿರಿಸಿ ವಿಚಾರಣೆ ಮುಂದೂಡಿತು. ರೆಡ್ಡಿ ಪರ ವಕೀಲ ಸಿ.ಎಚ್‌. ಹನುಮಂತರಾಯ ಅವರು ವಾದಿಸಿ, ಜನಾರ್ದನ ರೆಡ್ಡಿ ವಿರುದ್ಧ ಸಿಸಿಬಿ ಪೊಲೀಸರು ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಹೇಳಿಕೆಗಳ ಆಧಾರದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣದ 5ನೇ ಆರೋಪಿಯಿಂದ ಜಪ್ತಿ ಮಾಡಿಕೊಳ್ಳಬೇಕು. ರೆಡ್ಡಿ 6ನೇ ಆರೋಪಿಯಾಗಿದ್ದಾರೆ. ಹೀಗಾಗಿ, ಕಸ್ಟಡಿಗೆ ಕೇಳುವ ಗೋಜಿಗೆ ಹೋಗದ ಸಿಸಿಬಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದರ ಅರ್ಥ ಅವರ ವಿಚಾರಣೆ ಪೂರ್ಣಗೊಂಡಿದೆ ಎಂಬುದಾಗಿದೆ. ಈ ಎಲ್ಲ ಅಂಶಗಳಿಂದ ರಾಜಕೀಯ ವೈಷಮ್ಯ ದುರುದ್ದೇಶದಿಂದ ರೆಡ್ಡಿ ಅವರನ್ನು ಬಂಧಿಸಿರುವುದು ಗೊತ್ತಾಗಲಿದೆ. ಹೀಗಾಗಿ ಜಾಮೀನು ಮುಂಜೂರು ಮಾಡಬೇಕು ಎಂದು ಕೋರಿದರು. 

ವಿಚಾರಣೆ ವೇಳೆ ರೆಡ್ಡಿ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ, ಅರ್ಜಿದಾರ ರೆಡ್ಡಿಗೂ ಆ್ಯಂಬಿಡೆಂಟ್‌ ಕಂಪೆನಿಗೂ ನೇರ ಸಂಬಂಧವಿದೆಯೇ? ಅರ್ಜಿದಾರರ ವಿರುದ್ಧ ಯಾರಾದರೂ ಪ್ರತ್ಯೇಕ ದೂರು ನೀಡಿದ್ದಾರೆಯೇ? ಅಥವಾ ಅರ್ಜಿದಾರ ಯಾರಿಂದಾದರೂ ಹಣ ಪಡೆದಿರುವ ಬಗ್ಗೆ ದಾಖಲೆಗಳು ಲಭ್ಯವಾಗಿಯೇ? ವಿಚಾರಣೆ ವೇಳೆ ಇ.ಡಿ ಹೆಸರು ದುರ್ಬಳಕೆ ಮಾಡಿ ಕೊಳ್ಳಲಾಗಿದೆ ಎಂದು ಕಂಡು ಬಂದಿದೆ. ಆದರೆ, ವಂಚನೆ ಸಂಬಂಧ ಪ್ರತ್ಯೇಕ ಎಫ್ಐಆರ್‌ ದಾಖಲಿಸಿದ್ದೀರಲ್ಲ ಎಂದು ಸಿಸಿಬಿಯನ್ನು ನ್ಯಾಯಾಲಯ ಪ್ರಶ್ನಿಸಿತು.

Advertisement

Udayavani is now on Telegram. Click here to join our channel and stay updated with the latest news.

Next