Advertisement

ಪ್ರಚಾರಕ್ಕೆ ರೆಡ್ಡಿ  ಬಳ್ಳಾರಿಗೆ ಬರುವಂತಿಲ್ಲ

06:00 AM May 05, 2018 | Team Udayavani |

ಹೊಸದಿಲ್ಲಿ: ಕರ್ನಾಟಕ ಚುನಾವಣೆ ವೇಳೆ ಸೋದರ ಸೋಮಶೇಖರ ರೆಡ್ಡಿ ಪರ ಪ್ರಚಾರ ನಡೆಸುವುದಕ್ಕಾಗಿ ಬಳ್ಳಾರಿಗೆ ತೆರಳಲು ಗಣಿ ಉದ್ಯಮಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್‌ ಅನುಮತಿ ನಿರಾಕರಿಸಿದೆ. ನ್ಯಾಯಮೂರ್ತಿ ಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್‌ ಭೂಷಣ್‌ ಅವರ ನ್ನೊಳಗೊಂಡ ನ್ಯಾಯಪೀಠ ಈ ಸಂಬಂಧದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದೆ.

Advertisement

ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ. ಸೋದರರ ಪರ ಚುನಾವಣ ಪ್ರಚಾರ ನಡೆಸುವುದಕ್ಕಾಗಿ ಬಳ್ಳಾರಿ ಜಿಲ್ಲೆಗೆ ಪ್ರವೇಶಿಸಲು ಜನಾರ್ದನ ರೆಡ್ಡಿಗೆ ಅವಕಾಶ ನೀಡಬೇಕು. 10 ದಿನಗಳ ಮಟ್ಟಿಗಾದರೂ ಜಾಮೀನು ಷರತ್ತನ್ನು ಸಡಿಲಿಸಬೇಕು ಎಂದು ರೆಡ್ಡಿ ಪರ ವಕೀಲರು ಮನವಿ ಮಾಡಿ ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಕ್ಷಮಿಸಿ, ಈ ಅರ್ಜಿಯನ್ನು ಪರಿಗಣಿಸಲು ನಾವು ಇಷ್ಟಪಡುವುದಿಲ್ಲ. ಅರ್ಜಿಯನ್ನು ವಜಾಗೊಳಿಸ ಲಾಗಿದೆ’ ಎಂದು ಹೇಳಿತು. ಅಕ್ರಮ ಗಣಿಗಾರಿಕೆ ಪ್ರಕರಣ ದಲ್ಲಿ  ಮೂರು ವರ್ಷಗಳವರೆಗೆ ಜೈಲುವಾಸ ಅನುಭವಿಸಿದ್ದ ಜನಾರ್ದನ ರೆಡ್ಡಿಗೆ 2015ರಲ್ಲಿ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಕರ್ನಾಟಕದ ಬಳ್ಳಾರಿ, ಆಂಧ್ರದ ಕಡಪ ಹಾಗೂ ಅನಂತಪುರಕ್ಕೆ ಭೇಟಿ ನೀಡದಂತೆ ಈ ವೇಳೆ ಷರತ್ತು ವಿಧಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next