Advertisement

ಜನಾರ್ದನ ರೆಡ್ಡಿ ರೆಬೆಲ್: ಸ್ನೇಹಕ್ಕೆ ಜೀವ ಕೊಡಲು ತಯಾರು ಎಂದ ಶ್ರೀರಾಮುಲು

03:26 PM Dec 07, 2022 | Team Udayavani |

ಬಳ್ಳಾರಿ: ”ನನ್ನ ಸ್ನೇಹಿತ ಅಸಮಾಧಾನ ಗೊಳ್ಳದಂತೆ ನಾನು ಕೂರಿಸಿ ಮಾತಾಡುವೆ.ಅವರ ಮನವೊಲಿಸುವ ಕೆಲಸ ಮಾಡುವೆ.ಪಕ್ಷಕ್ಕೆ ಮುಜುಗರವಾಗದಂತೆ ಎಲ್ಲವನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವೆ” ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಅಸಮಾಧಾನಗೊಂಡಿರುವ ವಿಚಾರದ ಕುರಿತು ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಕಂಪ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಜನಾರ್ದನ ರೆಡ್ಡಿ ಅವರು ನನ್ನ ಆತ್ಮೀಯ ಸ್ನೇಹಿತರು. ಸ್ನೇಹ ಅಂದ್ರೆ ಜನಾರ್ದನ‌ ರೆಡ್ಡಿ ಮತ್ತು ರಾಮುಲು ಎನ್ನುವಂತೆ ಎಲ್ಲರೂ ಮಾತಾಡ್ತಾರೆ…ಸ್ನೇಹಕ್ಕೆ ಪ್ರಾಣ ಕೊಡೋ ವ್ಯಕ್ತಿ ರಾಮುಲು.ಸ್ನೇಹ ಮತ್ತು ರಾಜಕಾರಣ ಎರಡೂ ಕೂಡ ಮುಖ್ಯ.ಬಿಜೆಪಿ ಪಕ್ಷ ನನಗೆ ತಾಯಿ ಸಮಾನ.ಸ್ನೇಹ ಮತ್ತು ಪಾರ್ಟಿ ವಿಚಾರ ಬಂದಾಗ ಎರಡನ್ನೂ ಕೂಡ ಸರಿದೂಗಿಸಿಕೊಂಡು ಹೋಗುವೆ” ಎಂದು ಹೇಳಿದ್ದಾರೆ.

”ರಾಜಕಾರಣ ಬಂದಾಗ ಜನಾರ್ದನ ರೆಡ್ಡಿ ಅವರ ಬಗ್ಗೆ ಅಲ್ಲಿ ಇಲ್ಲಿ ಸುದ್ದಿಗಳನ್ನ ಕೇಳುತ್ತಾ ಇದ್ದೇವೆ.ನಾನಿನ್ನೂ ಜನಾರ್ದನ ರೆಡ್ಡಿ ಅವರನ್ನ ಭೇಟಿಯಾಗಿಲ್ಲ.ಜನಾರ್ದನ ರೆಡ್ಡಿ ಸದ್ಯದ ರಾಜಕೀಯದ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.ಅವರು ನನಗೆ ಸಿಕ್ಕ ಬಳಿಕ ಅವರನ್ನ ಕೂರಿಸಿಕೊಂಡು ಮಾತಾಡುವೆ”ಎಂದಿದ್ದಾರೆ.

ಗಂಗಾಗವತಿಯಲ್ಲಿ ರೆಡ್ಡಿ ಅವರ ಜೊತೆ ಬಿಜೆಪಿ ನಾಯಕರು ಕಾಣಿಸಿ ಕೊಂಡ ಬಗ್ಗೆ ಪ್ರತಿಕ್ರಿಯಿಸಿ,”ಅವರೆಲ್ಲರು ಹನುಮನ ಜಯಂತಿಗೆ ಬಂದಿದ್ದರು. ಸಾರ್ವಜನಿಕ ಕಾರ್ಯಕ್ರಮವಾಗಿರೋದ್ರಿಂದ ಎಲ್ಲರು ಪಕ್ಷಾತೀತವಾಗಿ ಬರುತ್ತಾರೆ.ಈ ಬಗ್ಗೆ ಅಪಾರ್ಥ ಕಲ್ಪಿಸೋದು ಬೇಡ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next