Advertisement

ಜನಾರ್ದನ ರೆಡ್ಡಿ ದೂರ ಇಟ್ಟಿದ್ದಕ್ಕೆ ಬಿಜೆಪಿಗೆ ಹಿನ್ನಡೆ

06:05 AM Jul 27, 2018 | Team Udayavani |

ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರನ್ನು ದೂರವಿಟ್ಟಿದ್ದರಿಂದಲೇ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು. 

Advertisement

ನಗರದಲ್ಲಿ ಗುರುವಾರ ನಡೆದ ಕಾರ್ಗಿಲ್‌ ವಿಜಯ್‌ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿ.ಜನಾರ್ದನ ರೆಡ್ಡಿ ಅವರನ್ನು ದೂರವಿಟ್ಟಿದ್ದ ರಿಂದಲೇ ಬಿಜೆಪಿಗೆ ಹಿನ್ನಡೆ ಯಾಗಿದ್ದು, ಬಹುಮತ ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ ಎಂದರು.ಬೆಂಗಳೂರಿನಲ್ಲಿ ಬುಧವಾರ ನಡೆದ ರೆಡ್ಡಿ ಸಮುದಾಯದ ಸಮಾವೇಶದಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next