Advertisement

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾತುಕತೆಯಾಗಿಲ್ಲ

10:46 PM Feb 02, 2024 | Team Udayavani |

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ , ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾತುಕತೆ ಆಗಿಲ್ಲ ವಿಧಾನಸಭೆ ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡನಗೌಡ ಪಾಟೀಲ್, ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಅವೆಲ್ಲವನ್ನು ನೋಡಿಕೊಳ್ಳುತ್ತಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಮೈತ್ರಿ ಮತ್ತು ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ. ಆದರೆ ಮುಂದಿನ ದಿನದಲ್ಲಿ ಅನೇಕ ನಾಯಕರ ಘರ್ ವಾಪಸಾತಿ ಆಗುತ್ತದೆ ಎಂದರು.

ದಕ್ಷಿಣ ಭಾರತ ಪ್ರತ್ಯೇಕ ದೇಶದ ಬೇಡಿಕೆ ಬಗ್ಗೆ ಸಂಸದ ಡಿ.ಕೆ ಸುರೇಶ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಡಿ.ಕೆ.ಸುರೇಶ್ ಹೇಳಿಕೆ, ಹುಚ್ಚುತನದ ಪರಮಾವಧಿ. ದೇಶದಲ್ಲಿ ಕಾಂಗ್ರೆಸ್ ಸರ್ವನಾಶವಾಗುತ್ತೆ ಎನ್ನೋದು ಅವರಿಗೆ ಗೊತ್ತಾಗಿದೆ. ಹೀಗಾಗಿ ಸೋಲಿನ ಹತಾಸೆಯಿಂದ ಹೇಳಿಕೆ ನೀಡುತ್ತಿದ್ದಾರೆ. ದೇಶದ್ರೋಹದ ಹೇಳಿಕೆ ನೀಡಿರುವ ಡಿ.ಕೆ.ಸುರೇಶ್ ರನ್ನು ದೇಶದಿಂದಲೇ ಗಡಿಪಾರು ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next