Advertisement

ಜನಾರ್ದನ ರೆಡ್ಡಿ ನೂತನ ಪಕ್ಷ ಪ್ರಭಾವ ಬೀರಲ್ಲ: ಸಚಿವ ಶ್ರೀರಾಮುಲು

09:33 PM Jan 02, 2023 | Team Udayavani |

ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌, ಜನಾರ್ದನ ರೆಡ್ಡಿ ನೇತೃತ್ವದ ನೂತನ ಕೆಆರ್‌ಪಿಪಿ ಸೇರಿ ಯಾವುದೇ ಪ್ರಾದೇಶಿಕ ಪಕ್ಷಗಳು ಪ್ರಭಾವ ಬೀರಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

Advertisement

ನಗರದ ದೇವಿನಗರದಲ್ಲಿ ಬಿಜೆಪಿ ಪಕ್ಷದ ಬೂತ್‌ ವಿಜಯ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರು ರಾಮುಲು ಅಥವಾ ಮತ್ತೂಬ್ಬರ ಮುಖ ನೋಡಿ ಮತ ಹಾಕಬಾರದು. ಮೈಸೂರು ಭಾಗದಲ್ಲಿ ಅಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲೂ ಬಿಜೆಪಿ ಗೆಲ್ಲಲಿದೆ.

ಹಾಗಾಗಿ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ಮೂರು ಸಾಮಾನ್ಯ ಕ್ಷೇತ್ರಗಳಾದ ಬಳ್ಳಾರಿ ನಗರ, ವಿಜಯನಗರ (ಹೊಸಪೇಟೆ), ಹರಪನಹಳ್ಳಿಯಲ್ಲಿ ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ, ಆನಂದ್‌ ಸಿಂಗ್‌, ಕರುಣಾಕರ ರೆಡ್ಡಿ ಗೆಲುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next