Advertisement

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ವರಮಹಾಲಕ್ಷ್ಮೀ ಪೂಜೆ

09:42 PM Aug 20, 2021 | Team Udayavani |

ಬಳ್ಳಾರಿ : ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ ಎನ್ನಲಾಗಿದೆ. ಮತ್ತೂಂದೆಡೆ ಅವರು ಬಂದಿಲ್ಲ ಎಂಬ ಸುದ್ದಿಯೂ ಹರಡಿತ್ತು. ಆದರೆ ರೆಡ್ಡಿ ಬಳ್ಳಾರಿಗೆ ಬಂದಿರುವ ಬಗ್ಗೆ ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

Advertisement

ನಗರದ ವೀರನಗೌಡ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸಮೇತರಾಗಿ ರೆಡ್ಡಿಯವರು ವರಮಹಾಲಕ್ಷ್ಮೀ ಪೂಜೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ವರ ಮಹಾಲಕ್ಷ್ಮೀ ಪೂಜೆ ಸಲ್ಲಿಸಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.
ಅವರ ಸಹೋದರ, ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಮಾತ್ರ ಜನಾರ್ದನ ರೆಡ್ಡಿಯವರು ಬಳ್ಳಾರಿಗೆ ಬಂದಿಲ್ಲ  ಸ್ವಾಮೀಜಿಗಳನ್ನು ಕೇಳಿ ಒಳ್ಳೆಯ ದಿನದಂದು ಅವರನ್ನು ಬಳ್ಳಾರಿಗೆ ಕರೆತರಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.

ಈ ನಡುವೆ ಜನಾರ್ದನ ರೆಡ್ಡಿ ತಮ್ಮ ನಿವಾಸದಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಹಾಗೂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ ಮಾಡುತ್ತಿರುವ ವೀಡಿಯೊ ವೈರಲ್‌ ಆಗಿದೆ. ಬಳಿಕ ಪೊಲೀಸರು ರೆಡ್ಡಿಯವರು ಬಳ್ಳಾರಿಗೆ ಬಂದಿರುವ ಬಗ್ಗೆ ಖಚಿತಪಡಿದ್ದಾರೆ.

ಇದನ್ನೂ ಓದಿ :ಷರತ್ತು ಉಲ್ಲಂಘನೆ; ಜೋಗದಲ್ಲಿ ಏಳು ಜನರ ವಿರುದ್ಧ ಪ್ರಕರಣ

Advertisement

Udayavani is now on Telegram. Click here to join our channel and stay updated with the latest news.

Next