Advertisement

ಜನತಾ ಜಲಧಾರೆ ಸಮಾರೋಪ: ಜೆಡಿಎಸ್ ಶಾಸಕ ಶ್ರೀನಿವಾಸ್ ಗೈರು

08:54 PM May 13, 2022 | Team Udayavani |

ಗುಬ್ಬಿ : ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ ಶುಕ್ರವಾರ ನೆಲಮಂಗಲದಲ್ಲಿ ನಡೆದ ಜನತಾ ಜಲಧಾರೆ ಸಮಾರೋಪ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಜೆಡಿಎಸ್ ನಾಯಕರಿಂದ ಮತ್ತಷ್ಟು ಅಂತರವನ್ನು ಕಾಯ್ದುಕೊಂಡತಾಗಿದೆ.

Advertisement

ಶ್ರೀನಿವಾಸ್ ಅವರು ಕಳೆದ ಮೂರು ಬಾರಿ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ಕಳೆದ ಎರಡು ವರ್ಷಗಳಿಂದೀಚೆಗೆ ಜೆಡಿಎಸ್ ಪಕ್ಷದ ನಾಯಕರಿಂದ ಅಂತರವನ್ನು ಕಾಯ್ದುಕೊಂಡಿದ್ದರು. ಜೆಡಿಎಸ್ ಪಕ್ಷವನ್ನು ತೊರೆದು ಬೇರೆ ಪಕ್ಷದತ್ತ ಒಲವು ತೋರುತ್ತಿದ್ದಾರೆ ಎಂಬುದು ಸಾರ್ವಜನಿಕವಾಗಿ ಚರ್ಚೆಯಾಗುತ್ತಿದೆ.

ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಜೆಡಿಎಸ್ ಪಕ್ಷದಿಂದ ದೂರ ಉಳಿಯುವ ಸೂಚನೆ ಎಂಬಂತಾಗಿದೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆ ಬೇರೆ ಪಕ್ಷ ಸೇರ್ಪಡೆಯಾಗುವುದು ಖಚಿತವಾದಂತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next