Advertisement

ಜಂತಕಲ್‌ ಪ್ರಕರಣ: ಕುಮಾರಸ್ವಾಮಿ ಅರ್ಜಿ ತಿರಸ್ಕೃತ

07:22 AM Nov 08, 2017 | Team Udayavani |

ಬೆಂಗಳೂರು: ಜಂತಕಲ್‌ ಎಂಟರ್‌ ಪ್ರೈಸಸ್‌ ಕಂಪನಿಗೆ ಪರವಾನಗಿ ನೀಡಲು ಸಹಕರಿಸಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗದಿರಲು ವಿನಾಯಿತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

Advertisement

 ನಾನು ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ 15 ದಿನಗಳಿಗೊಮ್ಮೆ ಹಾಜರಾಗಲು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಷರತ್ತಿನಿಂದ ಸಡಿಲಿಕೆ ನೀಡುವಂತೆ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅರ್ಜಿಯನ್ನು ಮಂಗಳವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಲಬುರಗಿ ಸಂಚಾರಿ ಪೀಠದಿಂದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ಎಸ್‌ಐಟಿ ಪರ ವಕೀಲರು ವಾದಿಸಿ, ಅರ್ಜಿದಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ತಮ್ಮ ದಿನನಿತ್ಯದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಪಕ್ಷದ ಸಭೆಗಳಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ವಿಚಾರಣೆಗೊಳಪಡಿ ‌ಬೇಕಿದೆ. ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಬಾರದು ಎಂದು ಕೋರಿದರು. 

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ತನಿಖೆ ನಡೆಯುತ್ತಿದ್ದಾಗ ಷರತ್ತಿನ ವಿನಾಯಿತಿ ನೀಡಲು ಸಾಧ್ಯವಿಲ್ಲ. ಇನ್ನೂ ಮೂರು ತಿಂಗಳು ಷರತ್ತು ಪೂರೈಸಿ ಎಂದು ಸೂಚನೆ ನೀಡಿ, ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next