Advertisement

ಮಹದಾಯಿ ವಿವಾದ ಬಗೆಹರಿಸಲು “ಮೂರು ಪಕ್ಷಗಳಿಗೆ” ಜನವರಿ ಡೆಡ್ ಲೈನ್!

03:23 PM Dec 27, 2017 | Team Udayavani |

ಬೆಂಗಳೂರು:ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷದವರು ಕುಳಿತು ಚರ್ಚಿಸಿ, ಜನವರಿಯೊಳಗೆ ಪ್ರಧಾನಿ ಭೇಟಿಗೆ ಅವಕಾಶ ಕೊಡಿಸಬೇಕು. ಇಲ್ಲದಿದ್ದರೆ ಸಿಎಂ ನಿವಾಸದ ಎದುರು ಮೌನ ಪ್ರತಿಭಟನೆ ನಡೆಸುವುದಾಗಿ ಮಹಾದಾಯಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

Advertisement

ಪಾದಯಾತ್ರೆ ಮೂಲಕ ಸಿಎಂ ನಿವಾಸಕ್ಕೆ ಮಹಾದಾಯಿ ಹೋರಾಟಗಾರರು ಆಗಮಿಸಿದ್ದರು. ಆದರೆ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗಿಯಾಗಿದ್ದರಿಂದ,ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಮನವಿ ಪತ್ರವನ್ನು ಸ್ವೀಕರಿಸಿದರು.

ಬಳಿಕ ಸಿಎಂ ನಿವಾಸ ಕಾವೇರಿ ಸಮೀಪ ಸುದ್ದಿಗಾರರ ಜತೆ ಮಾತನಾಡಿದ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ, ಜನವರಿ ಅಂತ್ಯದೊಳಗೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕಲ್ಪಿಸಬೇಕು, ಇಲ್ಲದಿದ್ದರೆ ಮುಂದೆ ಮತ್ತಷ್ಟು ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ನಾವು ಯಾವುದೇ ಒತ್ತಡಗಳಿಗೆ ಮಣಿಯುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next