Advertisement

ಈ ವಾರದಿಂದ ಹೊಸಬರ ಜಾತ್ರೆ!

06:08 PM Sep 22, 2021 | Team Udayavani |

ಚಿತ್ರಮಂದಿರಗಳ ಪೂರ್ಣ ಅನುಮತಿಗೆ ಕಾದು ಸುಸ್ತಾದ ಹೊಸಬರು ಈಗ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಹಾಗಾಗಿ, ವಾರ ವಾರ ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿದೆ.

Advertisement

ಈ ವಾರ “ಜನುಮದ ಜಾತ್ರೆ’ ಎಂಬ ಚಿತ್ರ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ದೊಡ್ಮನೆ ಮಂಜುನಾಥ್‌ ಎಂ ನಿರ್ಮಿಸಿದ್ದಾರೆ. ಆಟೋ ಆನಂದ್‌ ಈ ಚಿತ್ರದ ನಿರ್ದೇಶಕರು. ಜನ ಚಿತ್ರಮಂದಿರಕ್ಕೆ ಬರಬೇಕಾದರೆ ಪಕ್ಕಾ ಹಳ್ಳಿ ಸೊಗಡಿನ ದೇಸಿ ಸಿನಿಮಾ ಕೊಡಬೇಕೆಂಬ ಉದ್ದೇಶದಿಂದ “ಜನುಮದ ಜಾತ್ರೆ’ ಚಿತ್ರ ಮಾಡಿದ್ದಾರೆ.

ಹಾಗಾಗಿ,ಬಹುತೇಕ ಚಿತ್ರೀಕರಣ ಕೂಡಾ ಹಳ್ಳಿಯಲ್ಲೇ ನಡೆದಿದೆ. ದುಷ್ಟಶಕ್ತಿಯೊಂದು ನಾಯಕನ ಕುಟುಂಬಕ್ಕೆ ಯಾವ ರೀತಿ ತೊಂದರೆ ಕೊಡುತ್ತದೆ ಮತ್ತು ಅದರಿಂದ ಆ ಕುಟುಂಬ ಹಾಗೂ ತನ್ನ ಪ್ರೀತಿಯನ್ನು ನಾಯಕ ಹೇಗೆ ಉಳಿಸಿಕೊಳ್ಳುತ್ತಾನೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಜೊತೆಗೆ ಸುಖ ಬಂದಾಗ ಹಿಂದಿನ ಕಷ್ಟವನ್ನು ಮರೆಯಬೇಡಿ ಎನ್ನುವ ಸಂದೇಶ ಕೂಡಾ ಈ ಚಿತ್ರದಲ್ಲಿದೆಯಂತೆ.

ಇದನ್ನೂ ಓದಿ:ಚಡ್ಡಿದೋಸ್ತ್ ಮೊಗದಲ್ಲಿ ನಗು

ನಾಯಕನಾಗಿ ಮದನ್‌ ಕುಮಾರ್‌, ನಾಯಕಿಯಾಗಿ ಚೈತ್ರಾ ಅಭಿನಯಿಸಿದ್ದು, ಮತ್ತೊಂದು ಜೋಡಿಯಾಗಿ ಮಂಡ್ಯ ಕೆಂಪ ಹಾಗೂ ಅಂಜಲಿ ನಟಿಸಿದ್ದಾರೆ ಚಿತ್ರಕ್ಕೆ ಗೆ ವಿನು ಮನಸು ಸಂಗೀತ, ಮುಂಜಾನೆ ಮಂಜು ಛಾಯಾಗ್ರಹಣವಿದೆ. ಚಿತ್ರದಲ್ಲಿ ಮದನ್‌ ಕುಮಾರ್‌, ಚೈತ್ರಾ, ಮಂಡ್ಯ ಕೆಂಪ,ಅಂಜಲಿ ಸೇರಿದಂತೆ ಅನೇಕರು ನಟಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next