Advertisement

ಅಸ್ಸಾಂ ಪ್ರತಿಭಟನೆ ಎಫೆಕ್ಟ್; ಬಾಂಗ್ಲಾ ಸಚಿವರ ಬೆನ್ನಲ್ಲೇ ಜಪಾನ್ ಪ್ರಧಾನಿ ಭೇಟಿಯೂ ರದ್ದು

09:51 AM Dec 14, 2019 | Nagendra Trasi |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತ ಪ್ರವಾಸವನ್ನು ರದ್ದುಪಡಿಸುವ ಸಾಧ್ಯತೆ ಇದೆ ಎಂದು ಜಪಾನ್ ನ ಜೀಜಿ ಪ್ರೆಸ್ ವರದಿ ಮಾಡಿದೆ.

Advertisement

ಅಸ್ಸಾಂನ ಗುವಾಹಟಿಯಲ್ಲಿ ಡಿಸೆಂಬರ್ 15ರಿಂದ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅಬೆ ಭಾರತಕ್ಕೆ ಆಗಮಿಸಲು ಸಿದ್ದತೆ ನಡೆಸಿದ್ದರು.

ಏತನ್ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುವಾಹಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜ್ಯದ ವಿವಿಧೆಡೆ ವ್ಯಾಪಿಸಿದ್ದು, ಈ ನಿಟ್ಟಿನಲ್ಲಿ ಭಾರತ ಪ್ರವಾಸದ ಕುರಿತು ಮರು ಪರಿಶೀಲನೆ ನಡೆಸುವುದಾಗಿ ಶಿಂಜೋ ಅಬೆ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಡಿ.15ರಿಂದ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಶೃಂಗದಲ್ಲಿ ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಭೇಟಿ ನಡೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next