Advertisement

ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ನಿಧನ

10:44 AM May 05, 2021 | keerthan |

ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ (72) ಅವರ ಕೋವಿಡ್ 19 ಸೋಂಕಿಗೆ ತುತ್ತಾಗಿ ಬುಧವಾರ ಬೆಳಗ್ಗೆ ನಿಧನರಾದರು.

Advertisement

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಉಪಾಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ ನ ಗೌರವ ಕಾರ್ಯದರ್ಶಿಯಾಗಿ, ಜರಗನಹಳ್ಳಿ ವೀರಶೈವ ಸಮಾಜದ ಅಧ್ಯಕ್ಷರಾಗಿ, ಹಲವಾರು ಕನ್ನಡಪರ ಸಂಘಟನೆಗಳ ಒಡನಾಡಿಯಾಗಿ. ಸಂಘಟಕರಾಗಿ ಶಿವಶಂಕರ್ ಅವರು ಸೇವೆ ಸಲ್ಲಿಸಿದ್ದಾರೆ.

ಟಿಎಸ್ ನಾಗಾಭರಣ ಸಂತಾಪ: ಕನ್ನಡಸ ಕಣ್ಮಣಿ ಹೃದಯವಂತ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರ ನಿಧನ ದಿಗ್ಭ್ರಮೆಯನ್ನು ಉಂಟುಮಾಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾನವತಾವಾದಿಯಂತಿದ್ದ ಜರಗನಹಳ್ಳಿಯವರ ಒಡನಾಟ ಇಂದು-ನಿನ್ನೆಯದಲ್ಲ, ಅವರ ಬದುಕು ಬರವಣಿಗೆ ಎಲ್ಲವೂ ಆದರ್ಶನೀಯ ಇಂತಹ ಅಪರೂಪದ ವ್ಯಕ್ತಿ ಇಹಲೋಕ ತ್ಯಜಿಸಿದ್ದು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next