Advertisement

ಕೈಯಲ್ಲಿ ಸಮಸ್ಯೆ ಇಲ್ವಂತೆ;ಜಾರಕಿಹೊಳಿ ಡಿಕೆಶಿಗೆ ಬೆಸ್ಟ್‌ ಫ್ರೆಂಡಂತೆ!

12:39 PM Sep 14, 2018 | Team Udayavani |

ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ  ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಸಚಿವ ರಮೇಶ್‌ ಜಾರಕಿಹೊಳಿ ನನ್ನ ಬೆಸ್ಟ್‌ ಫ್ರೆಂಡ್‌ ಎಂದಿದ್ದಾರೆ. 

Advertisement

ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ವಿಚಾರದಲ್ಲಿ ಜಾರಕಿಹೊಳಿ ಸಚಿವರ ಅಸಮಾಧಾನದ ಕುರಿತು ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಡಿಸಿಎಂ ಪರಮೇಶ್ವರ್‌ ಪಕ್ಷದಲ್ಲಿ ಆಂತರಿಕವಾಗಿ 

ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದ  ವಿಚಾರಗಳನ್ನು ಬಗೆಹರಿಸುತ್ತೇವೆ. ಇನ್ನೂ ಕೆಲವರು ಸಣ್ಣ ವಿಚಾರಗಳನ್ನು ದೊಡ್ಡದು ಮಾಡುತ್ತಿದ್ದಾರೆ. ಬಳ್ಳಾರಿ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಿಲ್ಲ ಎಂದರು. 

ಸಿದ್ದರಾಮಯ್ಯ ಅವರು ವಾಪಾಸಾದ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. 

ಮೈ ಬೆಸ್ಟ್‌ ಫ್ರೆಂಡ್‌!
ಸಚಿವ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ  ರಮೇಶ್‌ ಜಾರಕಿಹೊಳಿ ನನ್ನ ಆತ್ಮೀಯ ಮಿತ್ರ. ಅವರ ಹತ್ತಿರ ನಾನೇ ಮಾತನಾಡುತ್ತೇನೆ. ಈಗ ಸ್ವಲ್ಪ ಬ್ಯುಸಿ ಇದ್ದೇನೆ. ಬಿಡುವು ಮಾಡಿ ನಾನೇ ಅವರ ಮನೆಗೆ ಹೋಗುತ್ತೇನೆ . ರಮೇಶ್‌ ಕಷ್ಟದಲ್ಲಿದ್ದಾನೆ ನಾನೇ ಕಲ್ಲು ಬಂಡೆಯ ಹಾಗೆ ಬೆನ್ನಿಗೆ ನಿಂತಿದ್ದೆ ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next