Advertisement

ಜಾರಕಿಹೊಳಿ ಪ್ರಕರಣ: ವಿಚಾರಣೆ ಮುಂದಕ್ಕೆ

10:47 PM Oct 07, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ನ.8ಕ್ಕೆ ಮುಂದೂಡಿದೆ.

Advertisement

ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಕ್ರಮ ಪ್ರಶ್ನಿಸಿ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ| ಸತೀಶ ಚಂದ್ರ ಶರ್ಮ  ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು.

ಈ ವೇಳೆ ಸಂತ್ರಸ್ತ ಯುವತಿ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ಯುವತಿ ಪರ ವಾದ ಮಂಡಿಸುತ್ತಿರುವ ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ, ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನ.8ಕ್ಕೆ ಮುಂದೂಡಿತು.

ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ತನಿಖೆ ಪೂರ್ಣಗೊಳಿಸಿ ಎಸ್‌ಐಟಿ ಪೊಲೀಸರು ಸಿದ್ಧಪಡಿಸಿರುವ ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಲು ನಿರಾಕರಿಸಿತ್ತು. ನ್ಯಾಯಾಲಯದ ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವಂತಿಲ್ಲ ಎಂದು ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next