Advertisement

ನಗರಸಭೆ, ಪೊಲೀಸ್‌ ಇಲಾಖೆಯಿಂದ ಜಾಥಾ

03:25 PM Aug 14, 2022 | Team Udayavani |

ಚಾಮರಾಜನಗರ: ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಆ. 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿರುವ ಹರ್‌ ಘರ್‌ ತಿರಂಗಾ ಅಭಿಯಾನ ಕಾರ್ಯಕ್ರಮ ಶನಿವಾರ ನಗರದ ವಿವಿಧೆಡೆ ನಡೆಯಿತು.

Advertisement

ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿದ ಜಾಥಾದಲ್ಲಿ ಅರಣ್ಯ, ಅಗ್ನಿಶಾಮಕ, ಅಬಕಾರಿ ಹಾಗೂ ಗೃಹರಕ್ಷಕ ದಳದ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಪೊಲೀಸ್‌ ಬ್ಯಾಂಡ್‌ ತಂಡ ಸಹ ಭಾಗವಹಿಸಿತ್ತು. ದೊಡ್ಡಂಗಡಿ ಬೀದಿ, ರಥದಬೀದಿ, ಪಚ್ಚಪ್ಪ ವೃತ್ತದ ಮೂಲಕ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಾಥಾ ಮುಕ್ತಾಯವಾಯಿತು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾ ಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮೂಲಕ ದೇಶದ ಸ್ವಾತಂತ್ರ್ಯಕ್ಕೆ ಕಾರಣರಾದ ಹೋರಾಟ ಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಇಲಾ ಖೆಯ ವತಿಯಿಂದ ಹರ್‌ ಘರ್‌ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ನಗರಸಭೆ: ಚಾಮರಾಜನಗರ ನಗರಸಭೆಯಿಂದ ಆಯೋಜಿಸಲಾಗಿದ್ದ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಆಶಾನಟರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು. ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿದರು. ಹರ್‌ ಘರ್‌ ತಿರಂಗಾ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದಂತೆ ಎಲ್ಲರೂ ಭಾರತ ತ್ರಿವರ್ಣ ಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ದೇಶಪ್ರೇಮ ಅಭಿಮಾನ ಮೆರೆದರು.

ನಗರಸಭೆ ಸದಸ್ಯರಾದ ಶಿವರಾಜು, ಗಾಯತ್ರಿಚಂದ್ರಶೇಖರ್‌, ನೀಲಮ್ಮ, ಚಿನ್ನಮ್ಮ, ಭಾಗ್ಯಮ್ಮ, ಮಮತ, ಅಬ್ರಾರ್‌ ಖಲೀಲ್‌, ಮಹೇಶ್‌, ಪ್ರಭಾರ ಪೌರಾಯುಕ್ತ ನಟರಾಜು, ಕಂದಾಯ ಅಧಿಕಾರಿ ಶರವಣ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್‌, ಸುಷ್ಮಾ, ಸಮುದಾಯ ಸಂಘಟನಾಧಿಕಾರಿ ವೆಂಕಟ್‌ ನಾಯಕ್‌, ಕಿರಿಯ ಅಭಿಯಂತತರಾದ ಆರಾಧ್ಯ, ದೇವರಾಜು, ನಗರಸಭೆಯ ನೀರು ಸರಬರಾಜು ನೌಕರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next