Advertisement

ಹಾಸನ  ಗೆಲ್ಲಲು ರಣತಂತ್ರ; ಜಾವಗಲ್‌ ಶ್ರೀನಾಥ್‌ ಬಿಜೆಪಿ ಸೇರ್ಪಡೆ?

02:31 PM Oct 24, 2018 | |

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಹಾಸನ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿ, ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದೆ.

Advertisement

ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರನ್ನು ಪಕ್ಷಕ್ಕೆ  ಸೆಳೆದು ಅವರಿಗೆ ಟಿಕೆಟ್‌ ನೀಡಲು ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಏರ್‌ ಡೆಕ್ಕನ್‌ ಸಂಸ್ಥಾಪಕ ಕ್ಯಾಪ್ಟನ್‌ ಗೋಪಿನಾಥ್‌ ಅವರ ಹೆಸರು ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ. 

ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರವನ್ನು ಮೈತ್ರಿ ಲೆಕ್ಕಾಚಾರದಲ್ಲಿ ಜೆಡಿಎಸ್‌ಗೆ ಬಿಟ್ಟುಕೊಡಲಿದ್ದು .ಕಾಂಗ್ರೆಸ್‌ನಲ್ಲಿ ಸಹಜವಾಗಿ ಭಿನ್ನಮತ ಕಾಣಿಸಿಕೊಂಡರೆ ಆ ಲಾಭವನ್ನೂ ಪಡೆಯಲು ಬಿಜೆಪಿ ಲೆಕ್ಕಾಚಾರ ಹಾಕಿದೆ.

Advertisement

Udayavani is now on Telegram. Click here to join our channel and stay updated with the latest news.

Next