Advertisement

ಜೇವರ್ಗಿ: ವಾಹನಗಳ ಓಡಾಟಕ್ಕಿಲ್ಲ ಬ್ರೇಕ್

01:16 PM Apr 24, 2020 | Team Udayavani |

ಜೇವರ್ಗಿ: ಲಾಕ್‌ ಡೌನ್‌ ವಿಸ್ತರಣೆಯಾದ ಬಳಿಕ ತಾಲೂಕಿನಲ್ಲಿ ಜನ ಹಾಗೂ ವಾಹನ ಸಂಚಾರ ಪ್ರಮಾಣ ಹೆಚ್ಚಿದೆ. ಪ್ರಭಾವಿಗಳ ಹೆಸರು ಹೇಳಿ ಪೊಲೀಸರೊಂದಿಗೆ ವಾಹನ ಸವಾರರು ವಾಗ್ವಾದಕ್ಕೂ ಇಳಿಯುತ್ತಿದ್ದಾರೆ.

Advertisement

ಲಾಕ್‌ಡೌನ್‌ ಆದೇಶ ಪಾಲಿಸುವಂತೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದರೂ ಮನೆ ಬಿಟ್ಟು ಹೊರಬೀಳುತ್ತಿರುವವರ ಸಂಖ್ಯೆ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎಲ್ಲರೂ ಒಂದೊಂದು ಕಾರಣ ಹೇಳುತ್ತಾ ಪೊಲೀಸರಿಗೆ ತಲೆನೋವು ತರಿಸುತ್ತಿದ್ದಾರೆ. ಒಂದು ಕಡೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂಬ ಸೂಚನೆ ನೀಡುತ್ತಿದ್ದರೆ, ಸ್ಥಳೀಯ ಜನಪ್ರತಿನಿಧಿಗಳು ಪೊಲೀಸರ ಕರ್ತವ್ಯದಲ್ಲಿ ಮಧ್ಯ ಪ್ರವೇಶಿಸುತ್ತಿದ್ದಾರೆ. ಯಾರ ಮಾತನ್ನು ಕೇಳಬೇಕು ಎಂಬುದು ಪೊಲೀಸರಿಗೆ ತಿಳಿಯದಂತಾಗಿದೆ. ಅನಗತ್ಯವಾಗಿ ರಸ್ತೆ ಗಿಳಿದವರ ಮೇಲೆ ಆರಂಭದಲ್ಲಿ ಲಾಠಿ ಬೀಸಿದ್ದ ಪೊಲೀಸರು ಬಳಿಕ ದಂಡ, ವಾಹನ ಸೀಜ್‌ ಅಸ್ತ್ರ ಪ್ರಯೋಗಿಸಿದ್ದರು. ಈಗ ಅದೂ ಕೂಡ ನಿಂತಿದೆ.

ಇದರಿಂದ ರಸ್ತೆ ಮೇಲೆ ಮಾಮೂಲಿ ದಿನಗಳಂತೆ ವಾಹನ ಓಡಾಟ ಶುರುವಾಗಿದೆ. ಎಷ್ಟೇ ಹೊಡಿರಿ, ಬಡಿರಿ ಓಡಾಡೋದು ಮಾತ್ರ ಬಿಡಲ್ಲ ಎನ್ನುವ ಸವಾರರಿಂದ ಪೊಲೀಸರಿಗೆ ತಲೆನೋವಾಗಿದೆ. ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ವಾಹನ ಸಂಚಾರ ಗಣನೀಯ ಪ್ರಮಾಣದಲ್ಲಿ ಹೆಚ್ಚಿದೆ. ಲಾಕ್‌ಡೌನ್‌ ಆರಂಭದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಹೆದ್ದರಿದ್ದ ಸವಾರರು, ಈಗ ವಿವಿಧ ಕಾರಣ ಹೇಳಿ ಪೊಲೀಸರಿಗೆ ದಾರಿ ತಪ್ಪಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next