Advertisement

ಅಕ್ರಮ ಆಸ್ತಿ ಗಳಿಕೆ :ಜಯಾ ವಿರುದ್ಧ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಜಾ

05:28 PM Apr 05, 2017 | Sharanya Alva |

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿ.ಜಯಲಲಿತಾ ಅವರನ್ನೂ ಕೂಡಾ ಅಪರಾಧಿ ಎಂದು ಘೋಷಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ. 

Advertisement

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ದಿ.ಜಯಲಲಿತಾ ಅವರನ್ನು ದೋಷಿ ಎಂದು ಘೋಷಿಸಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಕರ್ನಾಟಕ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾರನ್ನು ದೋಷಿ ಎಂದು ತೀರ್ಪು ನೀಡಿಲ್ಲ, ಹಾಗಾಗಿ ಜಯಾ ಅವರನ್ನು ದೋಷಿ ಎಂದು ಘೋಷಿಸಬೇಕೆಂದು ಕರ್ನಾಟಕ ಸರ್ಕಾರ ಕಳೆದ ತಿಂಗಳು ಮರುಪರಿಶೀಲನಾ ಅರ್ಜಿ ಅರ್ಜಿ ಸಲ್ಲಿಸಿತ್ತು. 

ಪ್ರಕರಣದಲ್ಲಿ ಜಯಾ ಅವರನ್ನು ದೋಷಿ ಎಂದು ಘೋಷಿಸದೇ ಹೋದರೆ ನಾವು 100 ಕೋಟಿ ರೂಪಾಯಿ ದಂಡ ವಸೂಲಿ ಮಾಡೋದು ಅಸಾಧ್ಯ ಎಂದು ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಆದರೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ನೀಡುವ ಸಂದರ್ಭದಲ್ಲಿ ಜಯ ಅವರು ನಿಧನರಾಗಿದ್ದರಿಂದ, ಸುಪ್ರೀಂಕೋರ್ಟ್ ಜಯಾರನ್ನು ತೀರ್ಪಿನಿಂದ ಹೆಸರನ್ನು ಕೈಬಿಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next