Advertisement

ಮಾಜಿ ಸಿಎಂ ದಿ|ಜಯಲಲಿತಾ ದತ್ತು ಪುತ್ರ ಸುಧಾಕರನ್‌ ಬಿಡುಗಡೆ

11:41 PM Oct 16, 2021 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ| ಜಯಲಲಿತಾ ಅವರ ದತ್ತುಪುತ್ರ ಸುಧಾಕರನ್‌ ಅವರು ಶನಿವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Advertisement

ಅವರು 4 ವರ್ಷ 8 ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸುಧಾಕರನ್‌ ಬಿಡುಗಡೆ ಆಗುತ್ತಿದ್ದಂತೆ ಚೆನ್ನೈನಿಂದ  ಆಗಮಿಸಿದ ಅವರ ಬೆಂಬಲಿಗರು ಜೈಲಿನ ಮುಂಭಾಗದಲ್ಲಿ   ಜೈಕಾರ ಹಾಕಿ ಸ್ವಾಗತಿಸಿದರು.

ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪೆ¤  ಶಶಿಕಲಾ ನಟರಾಜನ್‌ ಜತೆಯೇ ಸುಧಾಕರನ್‌ ಬಿಡುಗಡೆ ಆಗಬೇಕಿತ್ತು. ಆದರೆ ದಂಡ ಕಟ್ಟುವುದಕ್ಕೆ ಆಗದ ಹಿನ್ನೆಲೆ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸ ಅನುಭವಿಸಬೇಕಾಯಿತು. ಅಕ್ರಮ ಆಸ್ತಿ ಸಂಪಾದಿಸಿದ್ದ ಪ್ರಕರಣದಲ್ಲಿ 2017ರಲ್ಲಿ  ಇವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

Advertisement

Udayavani is now on Telegram. Click here to join our channel and stay updated with the latest news.

Next