Advertisement

ಲಾಕ್‌ಡೌನ್‌ ಮಧ್ಯೆ ಜಯಂತಿ ಆಚರಣೆಗೆ ಆದೇಶ!

06:52 PM Apr 02, 2020 | Sriram |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ವೈರಸ್‌ ಹರಡುವುದನ್ನು ತಡೆಗಟ್ಟಲು ರಾಜ್ಯ ಸರಕಾರ ಎಲ್ಲ ರೀತಿಯ ಸಾರ್ವಜನಿಕ ಸಮಾರಂಭಗಳ ಆಚರಣೆ ರದ್ದುಪಡಿಸಿದೆ. ಆದರೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಸೂಚನೆ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್‌ ನಾಯ್ಕ ಬಾಬು ಜಗಜೀವನ್‌ ರಾಮ್‌ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಣೆಗೆ ಆದೇಶ ಹೊರಡಿಸಿದ್ದಾರೆ.

Advertisement

ಎ. 5ರಂದು ಡಾ| ಬಾಬು ಜಗಜೀವನ್‌ ರಾಮ್‌ ಅವರ 113ನೇ ಜಯಂತಿ ಮತ್ತು ಎ. 14ರಂದು ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 129ನೇ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next