Advertisement

ವರ್ಷಕ್ಕೆ ಐದು ಸಿಲಿಂಡರ್‌ ಉಚಿತ: ಜೆಡಿಎಸ್‌ ಘೋಷಣೆ

12:35 AM Apr 16, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಬೆನ್ನಲ್ಲೇ ಜೆಡಿಎಸ್‌ “ಕರುನಾಡ ಜನರಿಗೆ ಪರಿಹಾರ’ ಎಂದು 12 ಭರ ವಸೆಗಳನ್ನು ಘೋಷಿಸಿದೆ. ವರ್ಷಕ್ಕೆ 5 ಸಿಲಿಂಡರ್‌ ಉಚಿತ, ಸ್ತ್ರೀಶಕ್ತಿ ಸಾಲ ಮನ್ನಾ, ವಿಕಲ ಚೇತನರ ಪಿಂಚಣಿ 2,500 ರೂ. ಹಾಗೂ ಹಿರಿಯ ನಾಗರಿಕರ ಪಿಂಚಣಿ 5,000 ರೂ. ಗಳಿಗೆ ಏರಿಕೆ, ಗರ್ಭಿಣಿ ತಾಯಂದಿರ ಅಗತ್ಯತೆ ಪೂರೈಕೆಗೆ 6 ತಿಂಗಳ ಕಾಲ 6,000 ರೂ. ಭತ್ತೆ, ವಿಧವಾ ವೇತನ 900 ರೂ.ನಿಂದ 2,500 ರೂ.ಗಳಿಗೆ ಹೆಚ್ಚಳ ಪ್ರಮುಖ ಭರವಸೆಗಳಾಗಿವೆ.

Advertisement

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಶನಿವಾರ ಜೆಡಿಎಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆ ಯರಿಗೆ 5000 ರೂ. ವರೆಗೆ, 15 ವರ್ಷ ಸೇವೆ ಸಲ್ಲಿಸಿ ನಿವೃತ್ತ ರಾದ ಕಾರ್ಯಕರ್ತೆಯರಿಗೆ ಪಿಂಚಣಿ ನೀಡುವುದಾಗಿಯೂ ಪ್ರಕಟಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next