Advertisement

ತಳಮಟ್ಟದಿಂದ ಪಕ್ಷ ಸಂಘಟಿಸಲು ಆಗ್ರಹ

04:44 PM Feb 20, 2021 | Team Udayavani |

ಶಿವಮೊಗ್ಗ: ಇಲ್ಲಿನ ಜೆಡಿಎಸ್‌ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವೀಕ್ಷಕರ ಸಮಿತಿ ಸಭೆಯಲ್ಲಿ ಜಿಲ್ಲಾಧ್ಯಕ್ಷರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು.

Advertisement

ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತು. ಮಾಜಿ ಸಚಿವ ಬಿ.ಬಿ. ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‌ನ ಜಿಲ್ಲಾ ಕಚೇರಿ ಗಾಂಧಿ  ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಪಕ್ಷ ಸಂಘಟನೆ ಕುರಿತು ಮಾತನಾಡಿದ ಬಹುತೇಕರು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌ ಅವರಿಗೆ ಜಿಲ್ಲಾ ಜೆಡಿಎಸ್‌ನ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.

ಹಾಗೆ ಬಂದು ಹೀಗೆ ಹೋಗುವವರಿಗೆ ಅಧಿಕಾರ ಕೊಡಬೇಡಿ. ಮಂಜುನಾಥ ಗೌಡ ಅವರನ್ನು ರಾತ್ರೋರಾತ್ರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಪಕ್ಷದ ಕ್ರಮವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕರ್ತರಿಗೆ ಅಧಿ ಕಾರ ಕೊಡಲಿಲ್ಲ. ಜಿಲ್ಲೆಯಲ್ಲಿ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ಆದರೆ ಅಧಿಕಾರಕ್ಕೆ ಬಂದಾಗ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಲಿಲ್ಲ. ಬೆಂಗಳೂರು ಕೇಂದ್ರಿತವಾಗಿ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿ ನೀಡಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌ ಅವರಿಗೆ ಅಧಿಕಾರ ಕೊಡಿ ಎಂದು  ಕಾರ್ಯಕರ್ತರು ಆಗ್ರಹಿಸಿದರು. ಎಂ. ಶ್ರೀಕಾಂತ್‌ ಅವರಿಗೆ ಅಧಿ ಕಾರ ಕೊಟ್ಟು, ಅವರನ್ನು ಮುಂದೆ ಬಿಟ್ಟು, ಉಳಿದವರೆಲ್ಲ ಹಿಂದೆ ಸರಿಯುವುದಲ್ಲ. ಅವರ ಮುಂದಾಳತ್ವದಲ್ಲಿ ಸಂಘಟನೆ ಆಗಬೇಕು. ಪಕ್ಷಕ್ಕೆ ಹೈಕಮಾಂಡ್‌ ನಿಂದ ಹಣಕಾಸಿನ ನೆರವು ಕೂಡ ಕೊಡಬೇಕು ಎಂದು ಕುರುಣಾಮೂರ್ತಿ ಹೇಳಿದರು.

Advertisement

ಕಾರ್ಯಕರ್ತರ ಸಭೆಗೆ ಜಿಲ್ಲಾಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಗೈರಾಗಿದ್ದರು. ಅವರು ಕೋರ್ಟ್‌ಗೆ ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ಸಭೆಗೆ ಬಂದಿಲ್ಲ. ಹಲವು ಹೋರಾಟ ನಡೆಸಿದ್ದಾರೆ. ಪಕ್ಷದ ಸಂಘಟನೆ ಮಾಡುತ್ತಿದ್ದಾರೆ ಎಂದು ತೀರ್ಥಹಳ್ಳಿಯ ಸುಂದರೇಶ್‌ ತಿಳಿಸಿದರು.

ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಕಾಂತರಾಜು ಅವರು, ಮಂಜುನಾಥ ಗೌಡ ಅವರಿಂದಾಗಿಯೇ ಪಕ್ಷಕ್ಕೆ ಈ  ಸ್ಥಿತಿ ಬಂದಿದೆ. ಅ ಧಿಕಾರ ಇದ್ದಾಗ ಇದ್ದರು. ಅಧಿ ಕಾರ ಹೋದ ಮರುದಿನದಿಂದ ಈ ಕಡೆ ಬಂದಿಲ್ಲ ಎಂದರು. ಕಾಂತರಾಜು ಅವರೊಂದಿಗೆ ಹಲವರು ಧ್ವನಿಗೂಡಿಸಿದರು. ಮಧ್ಯ ಪ್ರವೇಶಿಸಿದ ಶ್ರೀಕಾಂತ್‌ ಅವರು, ಮಂಜುನಾಥಗೌಡ ಅವರು ತೀರ್ಥಹಳ್ಳಿಯಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಆದರೆ ಅವರು ಜಿಲ್ಲಾ ಮಟ್ಟದಲ್ಲಿ ಸಂಘಟನೆ ಮಾಡಬೇಕು ಎಂದು ಎಲ್ಲರನ್ನೂ ಸಮಾಧಾನಪಡಿಸಿದರು.

ಜಿಪಂ ಸದಸ್ಯ ಮಣಿಶೇಖರ್‌ ಮಾತನಾಡಿದರು. ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್‌, ಡಿ.ಯಶೋಧರ, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು. ವೀಕ್ಷಕರ ಸಮಿತಿಯಲ್ಲಿದ್ದ ಪ್ರಜ್ವಲ್‌ ರೇವಣ್ಣ ಗೈರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next