Advertisement

ಬಹುಪಾಲು ಅಭ್ಯರ್ಥಿ ಇಲ್ಲದ ಕಡೆ ಜೆಡಿಎಸ್ ಸಹಕಾರ ಕೊಡಬಹುದು: ಬಿಎಸ್ ವೈ

01:56 PM Nov 27, 2021 | Team Udayavani |

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲಾ ಕಡೆ ಪ್ರಚಾರ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಥಹಳ್ಳಿ, ಸಾಗರ, ಸೊರಬ, ಚೆನ್ನಗಿರಿಯಲ್ಲೂ ಕೂಡ ಪ್ರಚಾರ ಮಾಡಲಿದ್ದೇನೆ.
ಬಿಜೆಪಿಯ ಅಭ್ಯರ್ಥಿ ಅರುಣ್ ಅವರು ಮೊದಲ ಸುತ್ತಿನಲ್ಲೇ ಗೆಲುವು ಸಾಧಿಸಬೇಕು.ರಾಜ್ಯದ 25 ಕ್ಷೇತ್ರದಲ್ಲಿ ಬಿಜೆಪಿ 20 ಕ್ಷೇತ್ರದಲ್ಲಿ ಸ್ಫರ್ಧೆ ಮಾಡಿದೆ.ಕನಿಷ್ಟ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಬರಲಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆ ಪ್ರವಾಸ ಮಾಡುತ್ತಿದ್ದೇನೆ, ನೂರಕ್ಕೇ ನೂರು ಗೆಲ್ಲುತ್ತೇವೆ. ಎಲ್ಲಾ ಕಡೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಚುನಾವಣೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ನೀಡುವಂತೆ ಕೇಳಿದ್ದೇನೆ.ಬಹುಪಾಲು ಅವರ ಅಭ್ಯರ್ಥಿ ಇಲ್ಲದ ಕಡೆ ಸಹಕಾರ ಕೊಡಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next