Advertisement

ಸಿಂದಗಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಪಾಟೀಲ್‌ ಸೋಮಜಾಳ ಹೃದಯಾಘಾತದಿಂದ ಸಾವು

01:27 AM Jan 21, 2023 | Team Udayavani |

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಪಾಟೀಲ್‌ ಸೋಮಜಾಳ (55) ಶುಕ್ರವಾರ ತಡರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಮಧ್ಯಾಹ್ನ ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಸಿಂದಗಿ ಪಟ್ಟಣಕ್ಕೆ ಮರಳಿದ್ದ ಅವರು, ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದರು.

ಮೂರು ದಿ️ನಗಳ ಹಿಂದಷ್ಟೇ ಸಿಂದಗಿಯಲ್ಲಿ ಪಂಚರತ್ನ ಸಮಾವೇಶ ಆಯೋಜಿಸಿದ್ದ ಸೋಮಜಾಳ, ಕುಮಾರಸ್ವಾಮಿ ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವಾಗಲೇ ಕೊನೆಯುಸಿರೆಳೆದಿ️ದ್ದಾರೆ. ಮೂಲತಃ ಅಲಮೇಲ ತಾಲೂಕು ಸೋಮಜಾಳ ಗ್ರಾಮದವರಾಗಿದ್ದ ಅವರು, ಹದಿ️ನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಇದನ್ನೂ ಓದಿ: ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ: ಸಚಿವ ಅಮಿತ್‌ ಶಾ

Advertisement

Udayavani is now on Telegram. Click here to join our channel and stay updated with the latest news.

Next