Advertisement

ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ

09:28 PM Jan 26, 2021 | Team Udayavani |

ಬೆಂಗಳೂರು :  ಸಭಾಪತಿ, ಉಪಸಭಾಪತಿ ಸ್ಥಾನದ ಕುರಿತು ಹೆಚ್.ಡಿ ದೇವೇಗೌಡ ನೇತೃತ್ವದಲ್ಲಿ ನಡೆದ ಜೆಡಿಎಸ್‌ ಪರಿಷತ್ ಸದಸ್ಯರ ಸಭೆ ಮುಕ್ತಾಯಗೊಂಡಿದೆ.

Advertisement

ಪದ್ಮನಾಭನಗರದ ಹೆಚ್‌ಡಿಡಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಭಾಪತಿ ಸ್ಥಾನವನ್ನು ಪಡೆಯುವ ಕುರಿತು ಹೆಚ್.ಡಿ ದೇವೇಗೌಡ ಪ್ರಸ್ತಾಪಿಸಿದರು. ಸತತ ಮೂರು ಗಂಟೆಗಳ‌ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಸಭೆಯಲ್ಲಿ ಹೊರಟ್ಟಿ ಬಗ್ಗೆ ಎಲ್ಲಾ ಸದಸ್ಯರ ಒಮ್ಮತ ವ್ಯಕ್ತಪಡಿಸಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮಗೊಳಿಸಿದೆ. ಇದಲ್ಲದೆ ಸಭೆಯಲ್ಲಿ ಉಪಸಭಾಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಳಿಸುವ ಬಗ್ಗೆ ಹಾಗೂ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಚರ್ಚೆ ನಡೆದಿದೆ.

ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಸವರಾಜ್ ಹೊರಟ್ಟಿ, ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಭೋಜೇಗೌಡ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದರಾಜ್, ರಮೇಶ್ ಗೌಡ, ತಿಪ್ಪೇಸ್ವಾಮಿ ಭಾಗಿಯಾಗಿದ್ದರು.

ಸಭೆ ಬಳಿಕ ಮಾತಾನಾಡಿದ ಬಸವರಾಜ್ ಹೊರಟ್ಟಿ ನನ್ನನ್ನು ಸಭಾಪತಿ ಮಾಡಬೇಕು ಅಂತ ತೀರ್ಮಾನ ಆಗಿದೆ. ಈ ಕುರಿತು ಯಡಿಯೂರಪ್ಪ, ಮೋದಿ, ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಅವರು ಈಗಾಗಲೇ ರಾಜ್ಯ ಬಿಜೆಪಿಗೆ ನಿರ್ದೇಶನ ಕೊಟ್ಟಿದ್ದಾರೆ ಎಂದರು.

 

Advertisement

ಇದನ್ನೂ ಓದಿ : ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು

Advertisement

Udayavani is now on Telegram. Click here to join our channel and stay updated with the latest news.

Next