Advertisement

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

04:52 PM Sep 22, 2023 | Team Udayavani |

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಶುಕ್ರವಾರ ಖಚಿತವಾಗಿದೆ.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರರನ್ನು ಭೇಟಿಯಾಗಿ ಮಹತ್ವದ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದರು. ಈ ವೇಳೆ ನಿಖಿಲ್ ಕುಮಾರ ಸ್ವಾಮಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.

Advertisement

”ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಹಿರಿಯ ನಾಯಕರು ಹಾಗೂ ಗೃಹ ಸಚಿವರಾದ ಅಮಿತ್ ಶಾ ಅವರ ಸಮ್ಮುಖದಲ್ಲಿ NDA (ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ) ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಎನ್‌ಡಿಎಗೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇದು ಎನ್‌ಡಿಎ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ, ಬಲಿಷ್ಠ ಭಾರತ ದೃಷ್ಟಿಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಜೆ.ಪಿ.ನಡ್ಡಾ ಟ್ವೀಟ್ ಮಾಡಿದ್ದಾರೆ.

ಸೀಟು ಹಂಚಿಕೆ ಮತ್ತು ಇತರ ವಿಚಾರಗಳ ಕುರಿತೂ ಚರ್ಚೆ ನಡೆದಿದ್ದು ಆ ಕುರಿತು ವಿವರಗಳನ್ನು ಬಹಿರಂಗಪಡಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next