Advertisement

ಜೆಡಿಎಸ್‌ ಒಂದು ನಾಟಕ ಕಂಪನಿ: ಡಿ.ಕೆ.ಶಿವಕುಮಾರ್‌ 

07:40 AM May 11, 2018 | Team Udayavani |

ಮದ್ದೂರು: ಜೆಡಿಎಸ್‌ ಒಂದು ನಾಟಕ ಕಂಪನಿ ಇದ್ದಂತೆ. ಇಂತಹ ಕಂಪನಿಗಳಿಗೆ ಜಿಲ್ಲೆಯಲ್ಲಿ ಮತ್ತೆ ಅವಕಾಶ ನೀಡಬೇಡಿ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಟೀಕಿಸಿದರು.

Advertisement

ತಾಲೂಕಿನ ಕೊಪ್ಪದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ನಾನು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಅಂತ ಕುಮಾರಸ್ವಾಮಿ ಹೇಳ್ತಾರೆ. ಆದರೆ, ಈ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಿರೋದೇ 50 ರಿಂದ 60 ಸೀಟು ಮಾತ್ರ. ಇನ್ನು ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋದು ಎಲ್ಲಿಂದ. ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದಾದ್ರೂ ಏನು ಎಂದು ಪ್ರಶ್ನಿಸಿದರು. ಬಿಜೆಪಿ ಕೂಡ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕನಿಷ್ಠ 132 ಸ್ಥಾನಗಳಲ್ಲಿ ಕಾಂಗ್ರೆಸ್‌ ಬಂದೇ ಬರುತ್ತದೆ. ಮತ್ತೆ ಅಧಿಕಾರ ಹಿಡಿಯುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next