Advertisement

ಕಾಂಗ್ರೆಸ್‌ನಿಂದ ಜೆಡಿಎಸ್‌ ಸೇರ್ಪಡೆ

12:09 PM Oct 13, 2021 | Team Udayavani |

ಅಫಜಲಪುರ: ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸತ್ತು ಅಲ್ಲಿನ ಕೆಲವು ಮುಖಂಡರು ಜೆಡಿಎಸ್‌ ಸೇರ್ಪಡೆ ಆಗಿದ್ದಾರೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಜಮೀಲ್‌ ಗೌಂಡಿ ತಿಳಿಸಿದರು.

Advertisement

ಪಟ್ಟಣದ ವಾರ್ಡ್‌ ನಂ. 4ರ ಮುಸ್ಲಿಂ ಮುಖಂಡರು ಕಾಂಗ್ರೆಸ್‌ ಪಕ್ಷ ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಆಡಳಿತ ಯಂತ್ರ ಕುಸಿದಿದೆ. ಯಾರೊಬ್ಬರಿಗೂ ಜನಪ್ರತಿನಿಧಿಗಳ ಮೇಲೆ ನಂಬಿಕೆ ಇಲ್ಲದಂತಾಗಿದೆ. ಅಲ್ಲದೇ ತಾಲೂಕಿನ ಕಾಂಗ್ರೆಸ್‌ ಶಾಸಕರು ಮತ್ತು ಅವರ ಬೆಂಬಲಿಗರು ಮಾತ್ರ ನಿತ್ಯ ಬೆಳಕಿಗೆ ಬರುತ್ತಿದ್ದಾರೆ. ಹೀಗಾಗಿ ಅನೇಕ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಮುಖಂಡ ಶಿವಕುಮಾರ ನಾಟಿಕಾರ ಮಾತನಾಡಿ, ಶಾಸಕ ಎಂ.ವೈ. ಪಾಟೀಲಗೆ ವಯಸ್ಸಾಗಿದೆ. ಅವರಿಂದ ಕ್ಷೇತ್ರದಲ್ಲಿ ಸಂಚಾರ ಮಾಡಲಾಗುತ್ತಿಲ್ಲ, ಅಧಿಕಾರಿಗಳು ಅವರ ಅಧೀನದಲ್ಲಿ ಇಲ್ಲ ಎಂದರು.

ಮುಖಂಡರಾದ ಮನ್ಸೂರ ಪಟೇಲ್‌, ಅಮರಸಿಂಗ್‌ ರಜಪೂತ, ಶ್ರೀಶೈಲಗೌಡ ಮಾಲಿಪಾಟೀಲ, ಯೂಸೂಫ ಭಾಗವಾನ, ಗೌಸ್‌ ಹಳ್ಯಾಲ, ಮೈಬೂಬ್‌ ಜೋಗೂರ, ಶಬ್ಬೀರ ದಿಕ್ಸಂಗಿ, ಸಾದೀಕ್‌ ಚೌಧರಿ, ಅಶೋಕ ದೊಡ್ಮನಿ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next