Advertisement

ಕಾಂಗ್ರೆಸ್ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಎಚ್.ಡಿ.ಕುಮಾರಸ್ವಾಮಿ ಆಪ್ತ ಭೋಜೇಗೌಡ

12:45 PM Apr 24, 2023 | Team Udayavani |

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಎಚ್ ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದ್ದು, ಸ್ವಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ.

Advertisement

ಜೆಡಿಎಸ್ ಮುಖಂಡ ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದರೂ ಭೊಜೇಗೌಡ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದರು. ಎಸ್.ಎಲ್.ಭೋಜೇಗೌಡ ಅವರು ಎಚ್.ಡಿ‌ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕ ಸಿ.ಟಿ.ರವಿ ಸೋಲಿಸಲು ಕಾಂಗ್ರೆಸ್- ಜೆಡಿಎಸ್ ಒಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ‘ಲಿಂಗಾಯತ’ ಹೇಳಿಕೆ ತಿರುಚಿಲ್ಲ, ‌ಜನರೇನು ದಡ್ಡರಲ್ಲ: ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next