Advertisement

ಹೆಚ್ ಡಿಕೆ, ನಿಖಿಲ್ ನಾಮಪತ್ರ ಸಲ್ಲಿಸುವ ಡೇಟ್ ಫಿಕ್ಸ್

09:25 PM Apr 03, 2023 | Team Udayavani |

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಎಪ್ರಿಲ್ 19 ರಂದು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೋಮವಾರ ತಿಳಿಸಿದ್ದಾರೆ. ಎಪ್ರಿಲ್‌ ಎ17 ರಂದು ಪಕ್ಕದ ರಾಮನಗರದಿಂದ ಪುತ್ರ ನಿಖಿಲ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

Advertisement

ಪ್ರಸ್ತುತ ಕುಮಾರಸ್ವಾಮಿ ಚನ್ನಪಟ್ಟಣವನ್ನು ಪ್ರತಿನಿಧಿಸುತ್ತಿದ್ದು, ರಾಮನಗರವನ್ನು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದಾರೆ. ಜೆಡಿಎಸ್ ಡಿಸೆಂಬರ್‌ನಲ್ಲಿ ಜೆಡಿಎಸ್ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು.

ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಸೋಮವಾರ ಸಂಜೆ ಸಭೆ ನಡೆಸಿದ್ದು, ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

40-50 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಅದನ್ನು ಬಿಡುಗಡೆಗೊಳಿಸಲಾಗುವುದು. ಮೂರನೇ ಪಟ್ಟಿಯು ನಾಲ್ಕರಿಂದ ಐದು ದಿನಗಳನ್ನು ತೆಗೆದುಕೊಳ್ಳಬಹುದು,ಎಂದು ಅವರು ಹೆಚ್ ಡಿಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next