Advertisement

ಜೆಡಿಎಸ್‌ ಅಲ್ಪಸಂಖ್ಯಾತರ ಸಮಾವೇಶ ಇಂದು

12:35 AM Jan 17, 2019 | |

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಿಸಿಕೊಂಡ ಖುಷಿಯಲ್ಲಿರುವ ಜೆಡಿಎಸ್‌ ನಿಗದಿಯಂತೆ ಗುರುವಾರ ನಗರದ ಅರಮನೆ ಮೈದಾನದಲ್ಲಿ ಅಲ್ಪಸಂಖ್ಯಾತರ ಸಮಾವೇಶ ಆಯೋಜಿಸಿದೆ. ಬೆಳಗ್ಗೆ ಹನ್ನೊಂದು ಗಂಟೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಲಿದಾರೆ.

Advertisement

ಜೆಡಿಎಸ್‌ನ ಎಲ್ಲ ಶಾಸಕರು, ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಅಲ್ಪಸಂಖ್ಯಾತರ ಘಟಕದ ಮುಖಂಡರನ್ನು ಆಹ್ವಾನಿಸಲಾಗಿದೆ. ಮುಂದಿನ ಲೋಕಸಭೆ ಚುನಾವಣೆ ಕಾರ್ಯತಂತ್ರ ಹಾಗೂ ಪಕ್ಷ ಸಂಘಟನೆ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದ್ದು, ಕೆಲವೊಂದು ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಅಲ್ಪಸಂಖ್ಯಾತರ ಅಭಿವೃದಿಟಛಿಗಾಗಿ ಸಮ್ಮಿಶ್ರ ಸರ್ಕಾರದಲ್ಲಿ ಕೈಗೊಂಡಿರುವ ಯೋಜನೆಗಳನ್ನು ಜನರಿಗೆ ತಲುಪಿಸಿ ಜೆಡಿಎಸ್‌ ಮೇಲೆ ವಿಶ್ವಾಸ ಬರುವಂತೆ ಮಾಡುವುದು ಸಮಾವೇಶದ ಉದ್ದೇಶ ಎಂದು ಹೇಳಲಾಗಿದೆ.
 

Advertisement

Udayavani is now on Telegram. Click here to join our channel and stay updated with the latest news.

Next