Advertisement

Rajya Sabha Elections; ಇಂದು ಜೆಡಿಎಸ್‌ ಶಾಸಕರ ಸಭೆ

11:26 PM Feb 25, 2024 | Team Udayavani |

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, 5ನೇ ಅಭ್ಯರ್ಥಿ ಹಾಕಿರುವ ಜೆಡಿಎಸ್‌ ತನ್ನದೇ ಕಾರ್ಯತಂತ್ರದಲ್ಲಿ ತೊಡಗಿದೆ.

Advertisement

ಈ ನಿಟ್ಟಿನಲ್ಲಿ ಸೋಮವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಮತ್ತು ಮತದಾನದಕ್ಕೆ ಬಗ್ಗೆ ಚರ್ಚೆ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಯ ಗೆಲುವಿನ ಜತೆ ಐದನೇ ಅಭ್ಯರ್ಥಿಯನ್ನೂ ಗೆಲ್ಲಿಸುವ ತಂತ್ರಗಳ ಬಗ್ಗೆ ಕುಮಾರಸ್ವಾಮಿಯವರು ಈಗಾಗಲೇ ಬಿಜೆಪಿ ವರಿಷ್ಠರು ಮತ್ತು ರಾಜ್ಯದ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next