Advertisement

ರೋಹಿಣಿ ಸಿಂಧೂರಿಯಿಂದ 6 ಕೋಟಿ ರೂ. ಭ್ರಷ್ಟಾಚಾರ : ಸಾ.ರಾ. ಮಹೇಶ್ ಆರೋಪ

07:27 PM Sep 03, 2021 | Team Udayavani |

ಮೈಸೂರು: ಮೈಸೂರು ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಾಗ್ದಾಳಿ ಮುಂದುವರೆಸಿದ್ದು, ಈ ಬಾರಿ ಸಿಂಧೂರಿ ಅವರ ಮೇಲೆ  6 ಕೋಟಿ ರೂ. ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.

Advertisement

ನಗರದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಒಂದ ಬಟ್ಟೆ ಬ್ಯಾಗ್ ಮೇಲೆ ಪ್ರಿಂಟ್ ಹಾಕಲು 42 ರೂ. ಬೇಕಾ? ಒಟ್ಟು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಈ ಬ್ಯಾಗ್ ಖರೀದಿಯಲ್ಲಿ 6.18 ಕೋಟಿ ರೂ. ಅಕ್ರಮ ನಡೆದಿದೆ.ವಾಸ್ತವವಾಗಿ ಖರೀದಿಗೆ 1.47 ಕೋಟಿ ರೂ. ಆಗುತ್ತಿತ್ತು ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ರೋಹಿಣಿ ಸಿಂಧೂರಿ ವಿರುದ್ಧ ಆರೋಪಿಸಿದರು.

ದಾಖಲೆಗಳ ಸಮೇತ ಆರೋಪ ಮಾಡುತ್ತಿದ್ದೇನೆ. ಈ ಹಣವನ್ನು ಅವರಿಂದಲೇ ವಸೂಲಿ ಮಾಡಬೇಕು. ಕ್ರಮ ಕೈಗೊಳ್ಳದಿದ್ದರೆ ಮುಖ್ಯ ಕಾರ್ಯದರ್ಶಿಗಳ ಮುಂದೆ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಗರಸಭೆ, ಪುರಸಭೆಗೆ ಇವರೇ ಬ್ಯಾಗ್ ಸರಬರಾಜು ಟೆಂಡರ್ ಗೆ ಅನುಮೋದನೆ ನೀಡಿದ್ದರು. ನಗರಸಭೆ, ಪುರಸಭೆ ಮೇಲೆ ಇವರಿಗೆ ಅಷ್ಟೊಂದು ಆಸಕ್ತಿ ಯಾಕೆ ಇತ್ತು ಎಂದು ಪ್ರಶ್ನಿಸಿದರು.

ಯಾವುದೇ ಸಂದರ್ಭದಲ್ಲಿ, ಯಾವುದೇ ಅಧಿಕಾರಿಗಳ ಬಗ್ಗೆ ರಾಜಕಾರಣಿಗಳು ಮಾತನಾಡುವಾಗ ಸಾರ್ವಜನಿಕವಾಗಿ ಬೇರೆ ರೀತಿ ಮಾತನಾಡುತ್ತಾರೆ. ಇನ್ನುಮಹಿಳಾ ಅಧಿಕಾರಿ ಆದರೆ ದೇವರೇ ಗತಿ. ಆ ಅಧಿಕಾರಿಯ ಹನ್ನೆರಡು ವರ್ಷಗಳ ಸೇವೆಯನ್ನು ನೋಡಿದ್ದೇನೆ. ಸರ್ಕಾರಿ ಕೆಲಸ ಮಾಡುವಲ್ಲಿ ದಕ್ಷತೆ ಇಲ್ಲ. ಅಪ್ರಮಾಣಿಕ ಅಧಿಕಾರಿ ನೇಮಕಕ್ಕೆ ವಿರೋಧ ಮಾಡಿದ್ದೆ. ನಾನು ಎಂಟು ಆರೋಪ ಮಾಡಿದ್ದೆ. ಅದರಲ್ಲಿ ಅವರ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ಅವರನ್ನು ಅಮಾನತು ಮಾಡಿ, ಲೋಪ ಆಗಿರುವ ಹಣವನ್ನು ಅವರಿಂದಲೇ ವಸೂಲಿ ಆಗಬೇಕು ಎಂದು ಮುಖ್ಯಮಂತ್ರಿ ಹಾಗೂ ಸರ್ಕಾರದ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next