Advertisement

ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿದ ಜೆಡಿಎಸ್‌ ಶಾಸಕ ಶ್ರೀನಿವಾಸಗೌಡ

05:27 PM Sep 15, 2021 | Team Udayavani |

ಬೆಂಗಳೂರು: ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

Advertisement

ಬುಧವಾರ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಶ್ರೀನಿವಾಸಗೌಡರು ಡಿ.ಕೆ.ಶಿವಕುಮಾರ್‌ ಜತೆ ಕೆಲಹೊತ್ತು ಸಮಾಲೋಚನೆ ನಡೆಸಿದರು.

ನಂತರ ಮಾತನಾಡಿದ ಕೆ.ಶ್ರೀನಿವಾಸಗೌಡ, ಇದೊಂದು ಸೌಹಾರ್ಧಯುತ ಭೇಟಿಯಾಗಿತ್ತು. ರಾಜಕೀಯ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದೇವೆ ಎಂದು ಹೇಳಿದರು.

ಶ್ರೀನಿವಾಸಗೌಡರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚಿಸಿದ್ದಾರೆ. ವಿಧಾನಸಭೆ ಚುನಾವಣೆ ವೇಳೆಗೆ ಅವರು ಕಾಂಗ್ರೆಸ ಸೇರಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:23 ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಸಿದ್ಧತೆ

Advertisement

ಜಿ.ಟಿ.ದೇವೇಗೌಡರ ನಂತರ ಇದೀಗ ಶ್ರೀನಿವಾಸಗೌಡರು ಅದೇ ಹಾದಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಗುಬ್ಬಿ ವಾಸು, ವಿಧಾನಪರಿಷತ್‌ ಸದಸ್ಯರಾದ ಬೆಮೆಲ್‌ ಕಾಂತರಾಜ್‌, ವಿ,ಮನೋಹರ್‌ ಅವರು ಸಹ ಕಾಂಗ್ರೆಸ್‌ ಸೇರುವ ಸಾಧ್ಯತೆಯಿದೆ. ಈಗಾಗಲೇ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಕೆ.ಶ್ರೀನಿವಾಸಗೌಡ ಸೇರಿದಂತೆ ಜೆಡಿಎಸ್‌ನ ಇಬ್ಬರು ಶಾಸಕರು ಹಾಗೂ ಇಬ್ಬರು ವಿಧಾನಪರಿಷತ್‌ ಸದಸ್ಯರಿಗೆ ಕಾಂಗ್ರೆಸ್‌ ಗಾಳ ಹಾಕಿರುವ ಬಗ್ಗೆ ಆಗಸ್ಟ್‌ 26 ರಂದು “ಉದಯವಾಣಿ’ ವಿಶೇಷ ವರದಿ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next