Advertisement

ಚಿಂಚೋಳಿ: ಕೃಷಿ ಇಲಾಖೆಯ ಭ್ರಷ್ಟಾಚಾರ ಖಂಡಿಸಿ ತಹಶೀಲ್ದಾರ್ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

03:43 PM Mar 23, 2022 | Team Udayavani |

ಚಿಂಚೋಳಿ (ಕಲಬುರಗಿ) :  ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೃಷಿ ಇಲಾಖೆಯ ಭಾರೀ ಭ್ರಷ್ಟಾಚಾರವನ್ನು ವಿರೋಧಿಸಿ ಜೆಡಿಎಸ್ ಪಕ್ಷದ ಮುಖಂಡರು ಧರಣಿ ಸತ್ಯಾಗ್ರಹ ನಡೆಸಿದರು.

Advertisement

ತಾಲ್ಲೂಕು ಕೃಷಿ ಇಲಾಖೆಯಲ್ಲಿ ಸರ್ಕಾರದ ಕೃಷಿ ಹೊಂಡ ,ಕೃಷಿ ಭಾಗ್ಯ, ಮತ್ತು ತುಂತುರು ಹನಿ ನೀರಾವರಿ ,ಕೃಷಿ ಯಂತ್ರೋಪಕರಣ ,ಬೀಜ ವಿತರಣೆ ದೊಡ್ಡ ಪ್ರಮಾಣದಲ್ಲಿ ಸಾಕಷ್ಟು ಅನುದಾನ ದುರ್ಬಳಕೆ ಮಾಡಲಾಗಿದೆ. ಇದರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಜೆಡಿಎಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

ಎಸ್ಸಿಪಿ ಟಿಎಸ್ಪಿ ಯೋಜನೆಗಳು ರೈತರಿಗೆ ತಲುಪಿಸದೇ ಅಧಿಕಾರಿಗಳು ಯೋಜನೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸಿದ್ದಾರೆ ಎಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಆಕ್ರೋಶ ವ್ಯಕ್ತಪಡಿದರು.

ಕೃಷಿ ಇಲಾಖೆಯಲ್ಲಿ ಅಕ್ರಮಗಳು ನಡೆಯಲು ಕಳೆದ ಹತ್ತು ವರ್ಷಗಳಿಂದ ಕೆಲಸ ಅನಿಲ್ ಕುಮಾರಾಠೋಡ್ ಅವರನ್ನು ಸೇವೆಯಿಂದ ಅಮಾನತ್ ನಡೆಸುವ ಮೂಲಕ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಅವರಿಗೆ ಸಲ್ಲಿಸಿದರು.

Advertisement

ರವಿಶಂಕರ್ ಮುತ್ತಂಗಿ ಹಣಮಂತ ಪೂಜಾರಿ ದೌಲಪ್ಪ ಸುಣಗಾರ್,  ಶರಣಪ್ಪ ಮಾಳಗೆ, ನಿಯಾಜ ಅಲಿ, ರಾಹುಲ್‌ ಯಾಕಾಪುರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next