Advertisement

ಕಾಪು : ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

01:27 PM Sep 14, 2022 | Team Udayavani |

ಕಾಪು‌ : ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆಯನ್ನು ಖಂಡಿಸಿ ಬುಧವಾರ ಕಾಪು ಪೇಟೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ವಿರೋಧಿ ದಿನ ಪ್ರತಿಭಟನೆ ನಡೆಯಿತು.

Advertisement

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಪ್ರದರ್ಶಿಸುತ್ತಿರುವ ನಮ್ಮ ದೇಶದಲ್ಲಿ ಆಯಾ ಪ್ರದೇಶಕ್ಕನುಗುಣವಾಗಿ ಪ್ರಾದೇಶಿಕತೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಅಂತಹ ಸಂದರ್ಭದಲ್ಲಿ ಹಿಂದಿ ಭಾಷೆಗೆ ಪ್ರಾಮುಖ್ಯತೆ ನೀಡುತ್ತಿರುವುದು ಖಂಡನೀಯವಾಗಿದೆ. ಈ ಬಗ್ಗೆ ರಾಜ್ಯದ ಜನರೆಲ್ಲರೂ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.

ಜೆಡಿಎಸ್ ಮುಖಂಡರಾದ ಸಂಕಪ್ಪ ಎ., ಜಯರಾಮ ಆಚಾರ್ಯ, ಉಮೇಶ್ ಕರ್ಕೇರ, ಭರತ್ ಶೆಟ್ಟಿ, ಇಕ್ಬಾಲ್ ಆತ್ರಾಡಿ, ಶ್ರೀಕಾಂತ್ ಪೂಜಾರಿ, ಸುಧಾಕರ್ ಶೆಟ್ಟಿ, ಸಂಜಯ್ ಕುಮಾರ್, ಹುಸೈನ್ ಹೈಕಾಡಿ, ಮನ್ಸೂರು ಅಹಮದ್, ವಿಮಲ, ಇಸ್ಮಾಯಿಲ್ ಪಲಿಮಾರ್, ವೆಂಕಟೇಶ ಎಂ ಟಿ., ಸಂಶುದ್ದೀನ್, ಅಬ್ದುಲ್ ರಜಾಕ್, ಚಂದ್ರಹಾಸ ಎರ್ಮಾಳು ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next