Advertisement

ಕಾರ್ಮಿಕರ ಹಿತಕ್ಕಾಗಿ ಜೆಡಿಎಸ್‌ ಪ್ರತಿಭಟನೆ

10:15 AM Oct 28, 2021 | Team Udayavani |

ಚಿಂಚೋಳಿ: ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಸ್ಥಾಪಿತವಾಗಿರುವ ಚೆಟ್ಟಿನಾಡ ಸಿಮೆಂಟ್‌ ಕಂಪನಿಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸರೋಜಿನಿ ಮಹಿಷಿ ವರದಿ ಪ್ರಕಾರ ವೇತನ ಕೊಡುವಂತೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಕಂಪನಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Advertisement

ಜೆಡಿಎಸ್‌ ಮುಖಂಡ ಸಂಜೀವನ್‌ ಯಾಕಾಪುರ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಕಲ್ಲೂರ ರೋಡ್‌ ಗ್ರಾಮದಲ್ಲಿ ಕಳೆದ 14 ವರ್ಷಗಳ ಹಿಂದೆ ಚೆಟ್ಟಿನಾಡ ಸಿಮೆಂಟ್‌ ಕಂಪನಿ ಪ್ರಾರಂಭಿಸಲಾಗಿದೆ. ಕಂಪನಿಯಲ್ಲಿ ವಿವಿಧ ಹಂತದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕೈಗಾರಿಕೆ ನಿಯಮಗಳ ಪ್ರಕಾರ ಕಾರ್ಮಿಕ ಇಲಾಖೆ ನಿಯಮಗಳು ಹಾಗೂ ಸರೋಜನಿ ಮಹಿಷಿ ವರದಿ ಪ್ರಕಾರ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಪ್ರಧಾನ ಕಾರ್ಯದರ್ಶಿ ಹಣಮಂತರಾವ ಪೂಜಾರಿ, ಫಕ್ರುದ್ದಿನ್‌ ಸುಲೇಪೇಟ ಮತ್ತು ಕಂಪನಿ ಕಾರ್ಮಿಕರು ಭಾಗವಹಿಸಿದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕಂಪನಿ ಮುಖ್ಯಸ್ಥರಿಗೆ ಮತ್ತು ತಹಶೀಲ್ದಾರ್‌ಗೆ ಸಲ್ಲಿಸಲಾಯಿತು. ಸಿಪಿಐ ಮಹಾಂತೇಶ ಪಾಟೀಲ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಮುಖಂಡರಾದ ಅಂಜಪ್ಪ ಕಲ್ಲೂರ, ಸನ್ನಿ ಜಾಬಶೆಟ್ಟಿ ಇನ್ನಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next