Advertisement
ಈ ಸಂದರ್ಭದಲ್ಲಿ ಕಂಪನಿಯ ಸೇಲ್ಸ್ ಜನರಲ್ ಮ್ಯಾನೇಜರ್ ವಿಜಯ್ ಕುಮಾರ್, ಸೀನಿಯರ್ ಮ್ಯಾನೇಜರ್ ಮಂಜುನಾಥ್, ಟಾಟಾ ಮೋಟರ್ಸ್ ನ ಶ್ರೀಧರ್ ಕಟ್ಟಿ, ಶಾಸಕ ಮಂಜುನಾಥ್, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಇದ್ದರು.ಇದೇ ವೇಳೆ ಪಂಚರತ್ನ ಯೋಜನೆಗಳ ಪ್ರಚಾರಕ್ಕೆ ಖರೀದಿಸಿರುವ 123 ಟಾಟಾ ಏಸ್ ವಾಹನಗಳಿಗೆ ಯಶವಂತಪುರದ ಬಳಿ ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದರು.
Related Articles
Advertisement
ಏನಿದು ಪಂಚರತ್ನ
ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪಂಚರತ್ನ ಕಾರ್ಯಕ್ರಮಗಳನ್ನು ರೂಪಿಸಿದೆ.
ಆರೋಗ್ಯ, ಕೃಷಿ, ನೀರಾವರಿ, ಉದ್ಯೋಗ ಹಾಗೂ ಮಹಿಳಾ – ಯುವ ಸಬಲೀಕರಣ; ಇವೇ ಪಂಚರತ್ನ ಕಾರ್ಯಕ್ರಮಗಳು. ಎಲ್ ಇಡಿ ವಾಹನಗಳ ಮೂಲಕ ಈ ಐದು ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ಕೊಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ
ಈ ವಾಹನಗಳಿಗೆ ಮುಂದಿನ 40 ದಿನಗಳ ಕಾಲ ಎಲ್ಇಡಿ ಸ್ಕ್ರೀನ್ ಅಳವಡಿಸುತ್ತೇವೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರದ ವಾಹನಗಳು ಸಂಚರಿಸಲಿವೆ ಎಂದರು.
ರಾಜ್ಯಾದ್ಯಂತ 180 ಕ್ಷೇತ್ರಗಳಲ್ಲಿ ಜನತಾ ಜಲಧಾರೆ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಕೆಲ ಬಿಜೆಪಿ, ಕಾಂಗ್ರೆಸ್ ನ ನಾಯಕರು ವ್ಯಂಗ್ಯ ಮಾಡುತ್ತಿದ್ದಾರೆ. ಗ್ರಾಫಿಕ್ಸ್ ನಲ್ಲಿ ಜನರನ್ನು ಸೃಷ್ಟಿಸಿದ್ರಾ ಅಂತಾ ಕೇಳಿದ್ದಾರಂತೆ. ಅವರಿಂದ ಪ್ರಮಾಣಪತ್ರ ನಮಗೆ ಬೇಕಿಲ್ಲ ಎಂದು ತಿರುಗೇಟು ನೀಡಿದರು.