Advertisement

ಎರಡು ಕ್ಷೇತ್ರಕ್ಕೆ ಜೆಡಿಎಸ್‌ ತೃಪ್ತಿ

11:14 AM May 16, 2018 | |

ಬೆಂಗಳೂರು: ರಾಜಧಾನಿಯ ಮತದಾರ ಜೆಡಿಎಸ್‌ಗೆ ಒಲಿಯುವುದಿಲ್ಲ ಎಂಬುದು ಮತ್ತೂಮ್ಮೆ ಸಾಬೀತಾಗಿದ್ದು, 26 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿ ಜೆಡಿಎಸ್‌ ತೃಪ್ತಿಪಟ್ಟುಕೊಳ್ಳುವಂತಾಗಿದೆ. 2008ರ ಚುನಾವಣೆಲ್ಲಿ ಒಂದೇ ಒಂದು ಕ್ಷೇತ್ರ, 2013ರ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಜೆಡಿಎಸ್‌, ಈ ಬಾರಿ ಎರಡು ಕ್ಷೇತ್ರಗಳಿಗೆ ಸೀಮಿತಗೊಂಡಿದೆ.

Advertisement

2008ರಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದ ಜೆಡಿಎಸ್‌, 2013ರಲ್ಲಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು. ಈಬಾರಿ ಮಹಾಲಕ್ಷ್ಮಿ ಲೇಔಟ್‌ನಿಂದ ಗೋಪಾಲಯ್ಯ ಹಾಗೂ ದಾಸರಹಳ್ಳಿಯಲ್ಲಿ ಆರ್‌.ಮಂಜುನಾಥ್‌ ಗೆಲುವು ಸಾಧಿಸಿದ್ದಾರೆ.

ಚಾಮರಾಜಪೇಟೆ ಹಾಗೂ ಪುಲಿಕೇಶಿನಗರದಲ್ಲಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹೋಗಿದ್ದ ಜಮೀರ್‌ ಅಹಮದ್‌ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಗೆಲುವು ಸಾಧಿಸಿದ್ದಾರೆ. ಆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಸೋಲು ಅನುಭವಿಸಿದೆ. ಜಮೀರ್‌ ಅಹಮದ್‌ ವಿರುದ್ಧ ಅಲ್ತಾಫ್ಖಾನ್‌, ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಸಿಗದೆ ವಂಚಿತರಾಗಿದ್ದ ಪ್ರಸನ್ನಕುಮಾರ್‌ ಅವರನ್ನು ಕರೆತಂದು ಜೆಡಿಎಸ್‌ ಟಿಕೆಟ್‌ ಕೊಟ್ಟು ಸ್ಪರ್ಧೆಗೆ ಇಳಿಸಿದರೂ ಜಯ ದಕ್ಕಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next