Advertisement

ಜೆಡಿಎಸ್‌ ಹಿರಿಯ ಉಪಾಧ್ಯಕ್ಷ ಅನ್ವರ್‌ ಶರೀಫ್ ನಿಧನ

12:13 PM Sep 08, 2018 | Team Udayavani |

ಬೆಂಗಳೂರು: ಜೆಡಿಎಸ್‌ ಹಿರಿಯ ಉಪಾಧ್ಯಕ್ಷ, ಇಸ್ಲಾಮಿಕ್‌ ಎಜುಕೇಷನಲ್‌ ಬೋರ್ಡ್‌ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅನ್ವರ್‌ ಶರೀಫ್ (58) ಶುಕ್ರವಾರ ಬೆಳಗ್ಗೆ ನಿಧನರಾದರು.

Advertisement

ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅನ್ವರ್‌ ಶರೀಫ್ ಅವರು, ಮೂರು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ವಾಪಸಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಗರದ ರಿಚರ್ಡ್ಸ್‌ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅನ್ವರ್‌ ಶರೀಫ್ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ.

ಅನ್ವರ್‌ ಶರೀಫ್ ಅವರ ಪಾರ್ಥೀವ ಶರೀರದ ಅಂತಿಮ ಸಂಸ್ಕಾರ, ಶುಕ್ರವಾರ ಸಂಜೆ ಖುದ್ದೂಸ್‌ ಸಾಹೇಬ್‌ ಖಬರಸ್ಥಾನ್‌ನಲ್ಲಿ ನಡೆಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡಿದ್ದರು. ಚುನಾವಣೆ ಸಂದರ್ಭದಲ್ಲಿ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಅವರ ಆರೋದ್ಯ ನಂತರದಲ್ಲಿ ಹದಗೆಟ್ಟಿತ್ತು.

ಅನ್ವರ್‌ ಶರೀಫ್ ನಿಧನಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಜಮೀರ್‌ ಅಹಮದ್‌, ಶಾಸಕರಾದ ರೋಷನ್‌ ಬೇಗ್‌, ಅಖಂಡ ಶ್ರೀನಿವಾಸ ಮೂರ್ತಿ, ವಿಧಾನಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ  ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next