Advertisement

JDS ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ಶಾಸಕ ಹೆಚ್.ಸಿ.ಬಾಲಕೃಷ್ಣ

12:34 PM Nov 18, 2023 | Team Udayavani |

ರಾಮನಗರ: ಆಪರೇಶನ್ ಹಸ್ತದ ಭೀತಿಯಿಂದ ಜೆಡಿಎಸ್ ಪಕ್ಷವು ಮತ್ತೆ ರೆಸಾರ್ಟ್ ರಾಜಕಾರಣದ ಮೊರೆ ಹೋಗುತ್ತಿದೆ ಎಂಬ ಸುದ್ದಿಯ ನಡುವೆಯೇ, ‘ಜೆಡಿಎಸ್ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ’ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ರಾಮನಗರದ ಎರೇಹಳ್ಳಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದೆ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ. ಈ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:Mohammed Shami ಹುಟ್ಟೂರಿನಲ್ಲಿ ಮಿನಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯುಪಿ ಸರ್ಕಾರ

ಕುಮಾರಸ್ವಾಮಿಯವರು ಜೆಡಿಎಸ್ ಜಾತ್ಯಾತೀತ ನಿಲುವಿಗೆ ತಿಲಾಂಜಲಿ ಇಟ್ಟ ಪರಿಣಾಮ ಕಾಂಗ್ರೆಸ್ ಶಕ್ತಿ ವೃದ್ಧಿಯಾಗಿದೆ. ಹಿಂದೆ ಜಾತ್ಯಾತೀತ ಶಕ್ತಿಗಳಲ್ಲಿ ಮತ ವಿಭಜನೆಯಾಗುತಿತ್ತು. ಜೆಡಿಎಸ್ ಬಿಜೆಪಿ ಮೈತ್ರಿಯಿಂದಾಗಿ ಜಾತ್ಯಾತೀತ ಶಕ್ತಿಗಳು ಕಾಂಗ್ರೆಸ್ ಬೆಂಬಲಿಸುತ್ತವೆ. ಜಾತ್ಯಾತೀತ ನಿಲುವಿಗೆ ಬದ್ಧವಾಗಿರುವ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next