Advertisement

ಜೆಡಿಎಸ್‌ ವಿದ್ಯಾರ್ಥಿ ಸದಸ್ಯತ್ವ ಅಭಿಯಾನ ಶುರು

07:00 AM Aug 13, 2017 | Team Udayavani |

ಬೆಂಗಳೂರು: ಜೆಡಿಎಸ್‌ ವಿದ್ಯಾರ್ಥಿ ಘಟಕದಿಂದ “ವಿದ್ಯಾರ್ಥಿ ಮಿತ್ರ ನಮ್ಮ ಕುಮಾರಣ್ಣ ‘ ಘೋಷಣೆಯಡಿ ಸದಸ್ಯತ್ವ ನೋಂದಣಿಗೆ ಶನಿವಾರ ಚಾಲನೆ ನೀಡಿತು.

Advertisement

ಪಕ್ಷದ ಕಚೇರಿ “ಜೆಪಿ’ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಎಂ.ಎಸ್‌.ನಾರಾಯಣರಾವ್‌ ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿದರು. 

ರಾಜ್ಯಾದ್ಯಂತ ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ವಿದ್ಯಾರ್ಥಿ ಘಟಕ ಬಲಪಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫ‌ಲ್ಯಗಳ ಕುರಿತು ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು.

ಮುಖಂಡರು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಪಕ್ಷದತ್ತ ಸೆಳೆಯಬೇಕು. ಜನತಾದಳ, ಜೆಡಿಎಸ್‌ ಸರ್ಕಾರದ ಅವಧಿಯಲ್ಲಿ ವಿದ್ಯಾರ್ಥಿ ಸಮುದಾಯಕ್ಕೆ ರೂಪಿಸಿದ ಯೋಜನೆಗಳ ಬಗ್ಗೆ ತಿಳಿಸುವ ಕೆಲಸ ಆಗಬೇಕು ಎಂದರು.

ವಿಧಾನಪರಿಷತ್‌ ಸದಸ್ಯರಾದ ರಮೇಶ್‌ಬಾಬು, ಟಿ.ಎ.ಶರವಣ, ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next