Advertisement

ಬಿಜೆಪಿ ಸರಕಾರಕ್ಕೆ ಜೆಡಿಎಸ್ ಬೆಂಬಲ; ಉಡುಪಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

10:13 AM Nov 07, 2019 | Nagendra Trasi |

ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡುವೆ ಏನು ಒಪ್ಪಂದವಾಗಿದೆಯೋ ಗೊತ್ತಿಲ್ಲ. ಆದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿದರೆ ಇವರು ಎಷ್ಟು ಜಾತ್ಯತೀತರು ಎಂಬುದು ಜನರಿಗೆ ತಿಳಿಯುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

ಬುಧವಾರ ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ದೇವೇಗೌಡರು ಬಿಜೆಪಿ ಸರ್ಕಾರ ಬೀಳಿಸಲು ಬಿಡಲ್ಲ ಎಂಬ ಕುರಿತು ಹರಿದಾಡುತ್ತಿರುವ ಸುದ್ದಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಜೆಡಿಎಸ್ ನವರು ಬಿಜೆಪಿಗೆ ಬೆಂಬಲ ಕೊಡೋದಾದ್ರೆ ಕೊಡಲಿ. ಇದರಿಂದ ಜೆಡಿಎಸ್ ಪಕ್ಷ ಎಷ್ಟು ಜಾತ್ಯತೀತ ಎಂಬುದು ಜನರಿಗೆ ತಿಳಿಯುತ್ತದೆ. ನಿಜಕ್ಕೂ ಜಾತ್ಯತೀತರಾದರೆ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದರು.

ಬಿಎಸ್ ಯಡಿಯೂರಪ್ಪ ಮತ್ತು ದೇವೇಗೌಡರ ನಡುವೆ ಏನು ಒಳಒಪ್ಪಂದ ನಡೆದಿದೆಯೋ ಗೊತ್ತಿಲ್ಲ ಎಂದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next