Advertisement

ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಬೆಂಬಲ: ದೇವೇಗೌಡ

12:52 PM Sep 27, 2020 | keerthan |

ಬೆಂಗಳೂರು: ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ರಾಜ್ಯಾದ್ಯಂತ ಬಂದ್ ಗೆ ನಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ ಎಂದಿದ್ದಾರೆ.

ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿರುವಂತೆಯೇ ರೈತರ ಆಕ್ರೋಶವೂ ಹೆಚ್ಚಾಗಿದೆ. ಸೋಮವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಜನ ಸಂಪೂರ್ಣ ಸಹಕಾರ ನೀಡಬೇಕು ಎಂದು ಐಕ್ಯ ಹೋರಾಟ ವೇದಿಕೆ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: “ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ

ಬಂದ್‌ಗೆ ಕಬಿನಿ ರೈತ ಹಿತರಕ್ಷಣ ಸಮಿತಿ, ರಾಜ್ಯ ಕೃಷಿ ಪಂಪ್‌ ಸೆಟ್‌ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಕರ್ನಾಟಕ ರಕ್ಷಣ ವೇದಿಕೆ  ಸಹಿತ ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ

Advertisement
Advertisement

Udayavani is now on Telegram. Click here to join our channel and stay updated with the latest news.

Next